ಸುಧೀರ್ಘ ಅವಧಿಯ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು

Date:

Advertisements

ಇಬ್ಬರು ವಯಸ್ಕರ ನಡುವೆ ಸುಧೀರ್ಘ ಕಾಲದಿಂದ ಒಪ್ಪಿತ ಲೈಂಗಿಕ ಸಂಬಂಧವಿದ್ದಲ್ಲಿ, “ವಿವಾಹವಾಗುವ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ” ಎಂಬ ಕಾರಣಕ್ಕೆಪುರುಷನಿಗೆ ಶಿಕ್ಷೆ ವಿಧಿಸುವುದು ನ್ಯಾಯಸಮ್ಮತವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.

ಈ ಸಂಬಂಧ 2022ರಲ್ಲಿ ವಿಳ್ಳುಪುರಂ ಮಹಿಳಾ ನ್ಯಾಯಾಲಯ 26 ವರ್ಷದ ವ್ಯಕ್ತಿಯೊಬ್ಬರಿಗೆ ನೀಡಿದ್ದ ಶಿಕ್ಷೆಯನ್ನು ನ್ಯಾಯಮೂರ್ತಿ ಸುಂದರ್ ಮೋಹನ್ ರದ್ದುಪಡಿಸಿದ್ದಾರೆ. “ಸುಧೀರ್ಘ ಅವಧಿಯಿಂದ ಇದ್ದ ಒಪ್ಪಿತ ಲೈಂಗಿಕ ಸಂಬಂಧ ಕೆಟ್ಟಿರುವುದು ಮಾತ್ರ ಪುರಾವೆಗಳಿಂದ ತಿಳಿದು ಬರುತ್ತದೆ. ಆದ್ದರಿಂದ ಭಾರತೀಯ ದಂಡಸಂಹಿತೆ ಸೆಕ್ಷನ್ 376 ಮತ್ತು 147ರ ಅಡಿಯಲ್ಲಿ ಶಿಕ್ಷೆ ನೀಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ದೂರು ನೀಡುವ ಸಂದರ್ಭದಲ್ಲಿ 24 ವರ್ಷ ವಯಸ್ಸಾಗಿದ್ದ ಮಹಿಳೆ ಅಪರಾಧದ ದೂರು ನೀಡಿದ್ದು, ತನ್ನ ವರ್ತನೆಯ ಪರಿಣಾಮಗಳ ಬಗ್ಗೆ ಅವರಿಗೆ ಅರಿವು ಇದ್ದಿರಬೇಕು. ಕೇವಲ ವಿವಾಹವಾಗುವ ಸುಳ್ಳು ಭರವಸೆಯ ಕಾರಣದಿಂದ ಆಕೆ ಲೈಂಗಿಕತೆಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗದು. ಸಂತ್ರಸ್ತೆ ಮುಗ್ಧೆ ಅಥವಾ ಮೋಸ ಹೋದವಳು ಎನಿಸುವುದಿಲ್ಲ” ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಚೋದನಕಾರಿ ಭಾಷಣ – ಆಯುಧ ಹಂಚಿಕೆ ಕಾನೂನು ಉಲ್ಲಂಘನೆಯಲ್ಲವೇ?

“ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ವಿವಾಹವಾಗುವ ಆಶ್ವಾಸನೆ ನೀಡಿ ಲೈಂಗಿಕ ಸಂಭೋಗ ನಡೆಸಿದ್ದಾನೆ ಎಂದು ಮೊದಲ ಬಾರಿಗೆ 25 ತಿಂಗಳ ಬಳಿಕ ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ವಿಳಂಬಕ್ಕೆ ಅತ್ಯಂತ ಮಹತ್ವವಿದೆ” ಎಂದು ವಿಶ್ಲೇಷಿಸಿದ್ದಾರೆ.

ಇತರ ಸಾಕ್ಷಿಗಳ ಪುರಾವೆಗಳಿಂದ ತಿಳಿದುಬರುವಂತೆ, ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಮತ್ತು ಸಂತ್ರಸ್ತೆ ನಿಕಟ ಸಂಬಂಧ ಹೊಂದಿದ್ದರು. ಆದ್ದರಿಂದ ಸುಳ್ಳು ಭರವಸೆ ನೀಡಿ ಲೈಂಗಿಕ ಕ್ರಿಯೆ ಎಸಗಿದ ಬಗ್ಗೆ ಸಾಕ್ಷಿಗಳು ಲಭ್ಯವಿಲ್ಲ. ವಿಳ್ಳುಪುರಂ ಮಹಿಳಾ ಕೋರ್ಟ್ 2022ರ ಡಿಸೆಂಬರ್ 9ರಂದು ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸುತ್ತಿದೆ ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X