ಬೆಂಗಳೂರಿನಲ್ಲಿ ರಾಜಸ್ಥಾನಿ ಯುವತಿಯ ಅಪಹರಣಕ್ಕೆ ಯತ್ನ: ಸಿನಿಮೀಯ ರೀತಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಹಿಡಿದ ಸಾರ್ವಜನಿಕರು

Date:

ಪ್ರೇಮ ವಿವಾಹವಾಗಿದ್ದ ರಾಜಸ್ಥಾನ ಮೂಲದ ಯುವತಿಯನ್ನು ಆಕೆಯ ಕುಟುಂಬಸ್ಥರೇ ಸುಪಾರಿ ನೀಡಿ ಅಪಹರಿಸಲು ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬುಧವಾರ ನಡೆದ ಈ ಕರಾಳ ಘಟನೆಯಲ್ಲಿ, ಯುವತಿಯನ್ನು ಕಾರಿನಲ್ಲಿ ಅಪಹರಿಸಿಕೊಂಡು ಪರಾರಿಯಾಗುತ್ತಿದ್ದ ದುಷ್ಕರ್ಮಿಗಳು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಆರು ಮಂದಿ ಸಾರ್ವಜನಿಕರು ಗಾಯಗೊಂಡಿದ್ದು, ಕಾರನ್ನು ಬೆನ್ನಟ್ಟಿದ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

​ರಾಜಸ್ಥಾನದ ಮೆಲ್ವಾಸ್ ಗ್ರಾಮದ ಗುಣರಾಮ್ ಎಂಬುವವರ ಪುತ್ರಿ 21 ವರ್ಷದ ಪೂಜಾ ಅಪಹರಣಕ್ಕೊಳಗಾದ ಯುವತಿ. ಈಕೆ ಒಂಬತ್ತು ತಿಂಗಳ ಹಿಂದಷ್ಟೇ ತನ್ನ ಪ್ರಿಯಕರ, 23 ವರ್ಷದ ಓಂ ಪ್ರಕಾಶ್ ಎಂಬಾತನನ್ನು ಕುಟುಂಬದ ವಿರೋಧದ ನಡುವೆಯೂ ವಿವಾಹವಾಗಿದ್ದಳು. ಮದುವೆಯ ಬಳಿಕ ಈ ನವದಂಪತಿ ರಾಜಸ್ಥಾನದಿಂದ ಬೆಂಗಳೂರಿಗೆ ಆಗಮಿಸಿ, ಅಗ್ರಹಾರ ದಾಸರಹಳ್ಳಿಯಲ್ಲಿ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

​ಪೂಜಾಳ ಪ್ರೇಮ ವಿವಾಹದಿಂದ ತೀವ್ರ ಅಸಮಾಧಾನಗೊಂಡಿದ್ದ ಆಕೆಯ ಕುಟುಂಬಸ್ಥರು, ಆಕೆಯನ್ನು ವಾಪಸ್ ಕರೆತರಲು ಅಥವಾ ಅಪಹರಿಸಲು ನಾಲ್ವರು ದುಷ್ಕರ್ಮಿಗಳನ್ನು ಬೆಂಗಳೂರಿಗೆ ಕಳುಹಿಸಿದ್ದರು. ಯೋಜನೆ ರೂಪಿಸಿಕೊಂಡು ಬಂದಿದ್ದ ಈ ತಂಡವು, ಪೂಜಾ ವಾಸವಿದ್ದ ಮನೆಗೆ ನುಗ್ಗಿ ಆಕೆಯನ್ನು ಬಲವಂತವಾಗಿ ಹುಂಡೈ ವೆನ್ಯೂ (ನೋಂದಣಿ ಸಂಖ್ಯೆ: RJ 22 CC 9691) ಕಾರಿನಲ್ಲಿ ಅಪಹರಿಸಿಕೊಂಡು ಪರಾರಿಯಾಗಲು ಯತ್ನಿಸಿದೆ.

​ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮ, ರಸ್ತೆಯಲ್ಲಿದ್ದ ಹಲವು ವಾಹನಗಳಿಗೆ ಈ ಕಾರು ಗುದ್ದಿದೆ. ಸರಣಿ ಅಪಘಾತದ ಪರಿಣಾಮವಾಗಿ ಪೃಥ್ವಿರಾಜ್ (12), ಯಶಿಕಾ (9), ಅಮುಲ್ (35), ಮಣಿ (64), ಜಯಲಕ್ಷ್ಮಿ (57) ಹಾಗೂ ಸಂತೋಷ್ (33) ಎಂಬುವವರು ಗಾಯಗೊಂಡಿದ್ದಾರೆ. ಇವರಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದಿರುವ 57 ವರ್ಷದ ಜಯಲಕ್ಷ್ಮಿ ಅವರನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

​ಕಾರು ಸರಣಿ ಅಪಘಾತ ಮಾಡುತ್ತಿದ್ದಂತೆಯೇ ಎಚ್ಚೆತ್ತ ಸಾರ್ವಜನಿಕರು, ಸಿನಿಮೀಯ ರೀತಿಯಲ್ಲಿ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ್ದಾರೆ. ಬಳಿಕ ಕಾರಿನಲ್ಲಿದ್ದ ದುಷ್ಕರ್ಮಿಗಳನ್ನು ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿವೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ರಾಜಸ್ಥಾನ ಮೂಲದ ರಾಕೇಶ್ (31), ಕರಣ್ (25) ಮತ್ತು ಅಯಾನ್ (18) ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

​ಈ ಘಟನೆಯಲ್ಲಿ ವಾಹನ ಚಲಾಯಿಸುತ್ತಿದ್ದ ಪ್ರಮುಖ ಆರೋಪಿ ಸದ್ದಾಂ ಎಂಬಾತ ಸಾರ್ವಜನಿಕರ ಕೈಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಎಸ್‌ಯುವಿ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಗಾಗಿ ಬಲೆಬೀಸಿದ್ದಾರೆ ಹಾಗೂ ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...