ತಮಿಳುನಾಡು | ಮಹಿಳೆಯರಿಗೆ ಮಾಸಿಕ 1 ಸಾವಿರ ಮಾಸಿಕ ಧನಸಹಾಯ ಯೋಜನೆಗೆ ಸಿಎಂ ಸ್ಟಾಲಿನ್‌ ಚಾಲನೆ

Date:

Advertisements

ಮಹಿಳೆಯರಿಗಾಗಿ ಮಾಸಿಕ 1 ಸಾವಿರ ಧನಸಹಾಯ ಯೋಜನೆಗೆ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ದ್ರಾವಿಡ ನೇತಾರ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನದಂದು ಕಾಂಚಿಪುರಂನಲ್ಲಿ ಚಾಲನೆ ನೀಡಿದರು.

ಇದು ಮಹಿಳೆಯರ ಶ್ರಮಕ್ಕೆ ಮನ್ನಣೆಯಾಗಿದೆ ಎಂದ ಸಿಎಂ ಹಲವಾರು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್‌ಗಳನ್ನು ವಿತರಿಸಿದರು. ರಾಜ್ಯ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಂ ಕೆ ಸ್ಟಾಲಿನ್, ಅಣ್ಣಾದೊರೈ ಅವರ ಜನ್ಮದಿನದಂದು ಮತ್ತು ಕರುಣಾನಿಧಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಯೋಜನೆಯು ಮೂಲ ಆದಾಯ ಕಾರ್ಯಕ್ರಮವಾಗಿದ್ದು, ಇದಕ್ಕೆ ಮಾಜಿ ಮುಖ್ಯ ಮಂತ್ರಿ ಎಂ ಕರುಣಾನಿಧಿ (ಕಲೈಗ್ನರ್ ಮಗಳಿರ್ ಉರಿಮೈ ತಿಟ್ಟಂ) ಅವರ ಹೆಸರನ್ನು ಇಡಲಾಗಿದೆ ಮತ್ತು ರಾಜ್ಯ ಸರ್ಕಾರವು ಸಹಾಯವನ್ನು ಮಹಿಳೆಯರ “ಹಕ್ಕು” ಎಂದು ನಾಮಕರಣ ಮಾಡಿದೆ.

Advertisements

ತಮಿಳುನಾಡು ಸರ್ಕಾರವು 1.06 ಕೋಟಿ ಮಹಿಳೆಯರನ್ನು ಫಲಾನುಭವಿಗಳೆಂದು ಗುರುತಿಸಿದೆ ಮತ್ತು ಅವರಿಗೆ 1,000 ರೂ. ಸಹಾಯಧನವನ್ನು ನೇರ ಲಾಭ ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ.

ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆಯ ಪ್ರಣಾಳಿಕೆಯ ಪ್ರಮುಖ ಲಕ್ಷಣವಾದ ಈ ಯೋಜನೆಯನ್ನು ಅಣ್ಣಾದೊರೈ ಅವರ ಜನ್ಮದಿನದಂದು ಸೆಪ್ಟೆಂಬರ್ 15 ರಂದು ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರವು ತಿಂಗಳ ಹಿಂದೆ ಘೋಷಿಸಿತ್ತು.

ಕಾಂಚೀಪುರಂ ಅಣ್ಣಾದೊರೈ ಅವರ ತವರು ಪಟ್ಟಣವಾಗಿದ್ದು, ಅಣ್ಣಾ ಅವರು 1949ರಲ್ಲಿ ಡಿಎಂಕೆ ಸ್ಥಾಪಿಸಿ 1967 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಮೊದಲ ಬಾರಿಗೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ತಂದರು. ಅಲ್ಲದೆ 1967 ರಿಂದ 1969ರವರೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ದಾಭೋಲ್ಕರ್ ಹತ್ಯೆ ಪ್ರಕರಣ: ಅಂತಿಮ ವರದಿಯಲ್ಲಿ ಮೂವರು ಆರೋಪಿಗಳ ಬಿಡುಗಡೆಗೆ ಸಿಬಿಐ ಶಿಫಾರಸ್ಸು

ತಮಿಳುನಾಡು ದೇವಾಲಯಗಳಲ್ಲಿ ಅರ್ಚಕರಾಗಿ ಮಹಿಳೆಯರ ನೇಮಕ: ಸ್ಟಾಲಿನ್ ಘೋಷಣೆ

ದ್ರಾವಿಡ ಮಾದರಿಯ ಆಡಳಿತದ ನೀತಿಯಂತೆ, ತಮಿಳುನಾಡಿನಲ್ಲಿ ಶೀಘ್ರದಲ್ಲೇ ಮಹಿಳೆಯರು ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯನಿರ್ವಹಿಸಲಿದ್ದಾರೆಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್‌, ‘ಪೈಲಟ್‌ಗಳು ಹಾಗೂ ಬಾಹ್ಯಾಕಾಶ ಯಾತ್ರಿಗಳಾಗಿ ಮಹಿಳೆಯರು ಸಾಧನೆಯನ್ನು ಮಾಡಿರುವ ಹೊರತಾಗಿಯೂ ಅವರನ್ನು ಅಪವಿತ್ರವೆಂದು ಪರಿಗಣಿಸಿ ದೇವಾಲಯಗಳಲ್ಲಿ ಪೌರೋಹಿತ್ಯದಂತಹ ಪವಿತ್ರವಾದ ಪಾತ್ರಗಳನ್ನು ನಿರ್ವಹಿಸುವುದರಿಂದ ದೂರವಿಡಲಾಗಿದೆ. ಸ್ತ್ರೀದೇವತೆಗಳ ದೇವಾಲಯದಲ್ಲೂ ಅವರನ್ನು ದೂರವಿಡಲಾಗಿದೆ. ಆದರೆ ಕೊನೆಗೂ ಇಲ್ಲಿ ಬದಲಾವಣೆಯಾಗಿದೆ ಎಂದು ಸ್ಟಾಲಿನ್ ತಿಳಿಸಿದ್ದಾರೆ.

‘‘ನಮ್ಮ ದ್ರಾವಿಡ ಮಾದರಿಯ ಸರಕಾರವು ತಮಿಳುನಾಡಿನಲ್ಲಿ ಎಲ್ಲ ಜಾತಿಯವರನ್ನು ಅರ್ಚಕರಾಗಿ ನೇಮಿಸುವ ಮೂಲಕ ತಂದೆ ಪೆರಿಯಾರ್ ಅವರ ಹೃದಯಕ್ಕೆ ತಾಗಿದ್ದ ಮುಳ್ಳನ್ನು ತೆಗೆದುಹಾಕಿದೆ. ಮಹಿಳೆಯರು ಈಗ ಗರ್ಭಗುಡಿಯೊಳಗೆ ಪ್ರವೇಶಿಸಲಿದ್ದು, ಎಲ್ಲರನ್ನೂ ಒಳಪಡಿಸಿದ ಹಾಗೂ ಸಮಾನತೆಯ ನೂತನ ಯುಗಕ್ಕೆ ನಾಂದಿ ಹಾಡಲಾಗಿದೆ’’ ಎಂದು ಹೇಳಿದ್ದಾರೆ.

ಎಲ್ಲ ಜಾತಿಗೆ ಸೇರಿದ ವ್ಯಕ್ತಿಗಳನ್ನು ದೇವಾಲಯಗಳಲ್ಲಿ ಅರ್ಚಕರಾಗಿ ತರಬೇತಿ ನೀಡುವ ಮತ್ತು ನೇಮಿಸುವ ಯೋಜನೆಯನ್ನು ಸ್ಟಾಲಿನ್ ಸರಕಾರ ಆರಂಭಿಸಿತ್ತು. ಈ ಯೋಜನೆಯಡಿ ತಿರುಚಿರಾಪ್ಪಳ್ಳಿಯ ಶ್ರೀರಂಗಂನ ಶ್ರೀರಂಗನಾಥರ್ ದೇವಾಲಯವು ನಡೆಸುತ್ತಿರುವ ಅರ್ಚಕರ ತರಬೇತಿ ಶಾಲೆಯಲ್ಲಿ ಮೂವರು ಮಹಿಳೆಯರು ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ.

ಬ್ರಾಹ್ಮಣೇತರರನ್ನು ದೇವಾಲಯದಲ್ಲಿ ಅರ್ಚಕರ ಪಾತ್ರವನ್ನು ನಿರ್ವಹಿಸಲು ಅವಕಾಶ ನೀಡದೆ ಇರುವುದು ತನ್ನ ಹೃದಯಕ್ಕೆ ತಗಲಿದ ಮುಳ್ಳೆಂದು ದ್ರಾವಿಡ ಚಳವಳಿಯ ನಾಯಕ ದಿವಂಗತ ಪೆರಿಯಾರ್ ಇ.ರಾಮಸ್ವಾಮಿ ಅವರು ಈ ಹಿಂದೆ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X