ಮಧ್ಯಪ್ರದೇಶ | ಮನೆಯ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹ ಪತ್ತೆ

Date:

Advertisements

ಮನೆಯೊಂದರ ಶೌಚ ಗುಂಡಿಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲೆಯ ಬದೋಖರ್ ಗ್ರಾಮದಲ್ಲಿರುವ ಹರಿಪ್ರಸಾದ್ ಪ್ರಜಾಪತಿ ಎಂಬವರ ನಿವಾಸದ ಹಿಂಬದಿಯಲ್ಲಿರುವ ಶೌಚ ಗುಂಡಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಪ್ರಜಾಪತಿ ಅವರ ಮನೆಯ ಬಳಿ ಕೊಳೆತ ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಶೌಚ ಗುಂಡಿಯಲ್ಲಿ ಮೃತದೇಹಗಳು ಕಂಡುಬಂದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisements

ಪೊಲೀಸರು ಸ್ಥಳಕ್ಕೆ ತೆರಳಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪ್ರಯತ್ನಿಸುತ್ತಿದ್ದಾರೆ. ಮೃತದೇಹಗಳು ಅದೇ ಮನೆಯವರದ್ದೇ ಇರಬಹುದು. ಅವರನ್ನು ಕೊಲೆ ಮಾಡಿ, ಶೌಚ ಗುಂಡಿಯಲ್ಲಿ ಹಾಕಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

“ಶೌಚ ಗುಂಡಿಯಲ್ಲಿ ನಾಲ್ಕು ಮೃತ ದೇಹಗಳಿವೆ. ಮೃತದೇಹಗಳನ್ನು ಹೊರತೆಗೆಯುವ ಕೆಲಸ ನಡೆಯುತ್ತಿದೆ. ಶೌಚಗುಂಡಿಗೆ ಸಮಾನಾಂತರ ಗುಂಡಿ ತೋಡುವ ಮೂಲಕ ಮೃತದೇಹಗಳನ್ನು ಹೊರೆ ತೆಗೆಯಲಾಗುತ್ತದೆ. ಮೃತದೇಹಗಳನ್ನು ಹೊರ ತೆಗೆದ ನಂತರವೇ ಮೃತದೇಹಗಳ ಗುರುತು ದೃಢವಾಗಲಿದೆ. ಮೇಲ್ನೋಟಕ್ಕೆ ಆ ಮೃತದೇಹಗಳು ಮನೆಯ ಮಾಲಕರ ಕುಟುಂಬದ ಸದಸ್ಯರದ್ದೇ ಇರಬಹುದೆಂದು ಶಂಕಿಸಲಾಗಿದೆ” ಎಂದು ಸಿಂಗ್ರೌಲಿಯ ಪೊಲೀಸ್ ವರಿಷ್ಠಾಧಿಕಾರಿ ಮನೀಸ್ ಖತ್ರಿ ತಿಳಿಸಿದ್ದಾರೆ.

“ಮೃತದೇಹಗಳ ಪೈಕಿ ಒಂದು ದೇಹವು ಮನೆಯ ಮಾಲಕರ ಪುತ್ರ ಸುರೇಶ್ ಪ್ರಜಾಪತಿಯದ್ದು ಎಂಬ ಅನುಮಾನಗಳಿವೆ” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X