ಪೊಲೀಸರ ಎದುರೇ ಮಗಳನ್ನು ಗುಂಡಿಕ್ಕಿ ಹತ್ಯೆಗೈದ ದುರುಳ ತಂದೆ

Date:

ದುರುಳ ವ್ಯಕ್ತಿಯೊಬ್ಬ ಪೊಲೀಸರ ಎದುರೇ ತನ್ನ ಮಗಳನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ವಿವಾಹಕ್ಕೆ ಸಂಬಂಧಿಸಿದ ಜಗಳದಿಂದಾಗಿ 20 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ್ದಾರೆ.

- Advertisement -

ಗ್ವಾಲಿಯರ್‌ನ ಗೋಲಾ ಕಾ ಮಂದಿರ ಪ್ರದೇಶದಲ್ಲಿ ಘಟನೆ ನಡೆದಿದೆ. ಹತ್ಯೆಗೀಡಾದ ಯುವತಿಯನ್ನು ತನು ಗುರ್ಜಾರ್ ಎಂದು ಹೆಸರಿಸಲಾಗಿದೆ. ಆಕೆಯನ್ನು ಆಕೆಯ ತಂದೆ ಮಹೇಶ್ ಗುರ್ಜಾರ್ ಹತ್ಯೆಗೈದಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ತನು ಅವರಿಗೆ ಕುಟುಂಬಸ್ಥರು ವಿವಾಹ ನಿಶ್ಚಯಿಸಲು ಮುಂದಾಗಿದ್ದರು. ವರನೊಬ್ಬನನ್ನು ಹುಡುಕಿ, ಮದುವೆ ಪ್ರಸ್ತಾಪವನ್ನು ಯುವತಿಯ ಮುಂದಿಟ್ಟಿದ್ದರು. ಆದರೆ, ವಿವಾಹಕ್ಕೆ ನಿರಾಕರಿಸಿದ ಯುವತಿ, ತಾವು ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದಾರೆ.

ಕುಟುಂಬಸ್ಥರು ನಿಶ್ಚಿಯಿಸಿದ್ದ ವಿವಾಹವನ್ನು ಸಂಬಂಧಿಗಳ ಎದುರು ಯುವತಿ ನಿರಾಕರಿಸಿದ್ದರಿಂದ ಕುಪಿತಗೊಂಡ ಆಕೆಯ ತಂದೆ ಮಹೇಶ್‌, ದೇಸೀ ಬಂದೂಕಿನಿಂದ ಆಕೆಯ ಮೇಲೆ ಗುಂಡು ಹಾರಿಸಿ, ಹತ್ಯೆಗೈದಿದ್ದಾರೆ. ಅಲ್ಲದೆ, ಸಂಬಂಧಿ ರಾಹುಲ್ ಎಂಬಾತ ಕೂಡ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ.

ಘಟನೆಗೂ ಮುನ್ನ ಯುವತಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, “ನನ್ನ ಇಚ್ಛೆಗೆ ವಿರುದ್ಧವಾಗಿ ನನ್ನ ಕುಟುಂಬವು ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದೆ. ನನ್ನ ತಂದೆ ಮಹೇಶ್ ಮತ್ತು ಇತರ ಕುಟುಂಬ ಸದಸ್ಯರು ನನಗೆ ಒತ್ತಡ ಹೇರುತ್ತಿದ್ದಾರೆ. ನಾನು ವಿಕ್ಕಿ ಎಂಬಾತನನ್ನು ವಿವಾಹವಾಗಲು ಬಯಸಿದ್ದೇನೆ. ಆದರೆ, ನನ್ನ ಕುಟುಂಬದವರು ಒಪ್ಪುತ್ತಿಲ್ಲ. ದಿನನಿತ್ಯ ನನ್ನನ್ನು ಥಳಿಸುತ್ತಿದ್ದಾರೆ. ಕೊಲ್ಲುವ ಬೆದರಿಕೆ ಹಾಕಿದ್ದಾರೆ. ನನಗೆ ಜೀವ ಭಯವಿದೆ” ಎಂದು ಹೇಳಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಆರಿಸಿದ ಮತದಾರರಿಗೆ ಅವಮಾನಿಸುತ್ತಿರುವ ಕಾಂಗ್ರೆಸ್; ಫ್ಯಾಸಿಸ್ಟ್ ನರೇಟಿವ್ ಕಟ್ಟುತ್ತಿರುವ ಮಾಧ್ಯಮಗಳು

ವೈರಲ್ ಆದ ವಿಡಿಯೋವನ್ನು ಕಂಡ ಪೊಲೀಸರು ಯುವತಿಯ ಮನೆಗೆ ತೆರಳಿದ್ದು, ಯುವತಿ ಮತ್ತು ಕುಟುಂಬಸ್ಥರನಡುವೆ ಸಂಧಾನ ಮಾಡಿಸಲು ಮುಂದಾಗಿದ್ದರು. ಈ ವೇಳೆ, ಯುವತಿ ತನ್ನ ಕುಟುಂಬದೊಂದಿಗೆ ಇರಲು ನಿರಾಕರಿಸಿದ್ದಾರೆ. ಯುವತಿಯನ್ನು ಮಾತನಾಡಲು ಪ್ರತ್ನೇಕವಾಗಿ ಕರೆದೊಯ್ದ ಯುವತಿಯ ತಂದೆ, ಆಕೆಯ ಮೇಲೆ ಗುಂಡು ಹಾರಿಸಿದ್ದಾರೆ.

ಆರೋಪಿ ಮಹೇಶ್ ಗುರ್ಜರ್‌ನನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ. ರಾಹುಲ್ ಎಂಬಾತ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೇವಾ ಅವಧಿಯಲ್ಲಾದ ದೈಹಿಕ ಸಮಸ್ಯೆಯು ‘ಸೇವಾ ಸಂಬಂಧಿ’ ಎಂದೇ ಪರಿಗಣಿತ: ಸುಪ್ರೀಂ ಕೋರ್ಟ್

ಸೇನಾ ಪಡೆಗೆ ಸೇರ್ಪಡೆಯಾಗುವ ಸಂದರ್ಭದಲ್ಲಿ ಯಾವುದೇ ದೈಹಿಕ ಅಥವಾ ಮಾನಸಿಕ ಅನಾರೋಗ್ಯ...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...

‘ನಾನೇ ಬುರುಡೆ ಒಡೆದಿದ್ದು’ ಎಂದಾತನಿಗೆ ಜಾಮೀನು; ಪುರಾವೆ ಇಲ್ಲದಿದ್ದರೂ ವರ್ಷಗಳಿಂದ ಜೈಲಿನಲ್ಲಿದ್ದಾರೆ ಹೋರಾಟಗಾರರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ...