ಹೆಲ್ಮೆಟ್ ಧರಿಸಿಲ್ಲವೆಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸರು

Date:

Advertisements

ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಅಜಯ್‌ಘಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ನಿವಾಸಿಯಾಗಿರುವ ಸುಶೀಲ್ ಕುಮಾರ್ ಶುಕ್ಲಾ ಅವರು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಪೊಲೀಸ್ ಸಿಬ್ಬಂದಿಯೊಬ್ಬ ಹೆಲ್ಮೆಟ್ ಧರಿಸಿಲ್ಲ ಎಂದು 300 ರೂ. ದಂಡ ವಿಧಿಸಿ ಚಲನ್ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಯ ಕಾರ್ಯದಿಂದ ತಬ್ಬಿಬ್ಬಾದ ಸುಶೀಲ್ ಕುಮಾರ್ ನ್ಯಾಯಕ್ಕಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ನಡೆದ ಘಟನೆ ಕುರಿತು ದೂರು ನೀಡಿದ್ದಾರೆ. ಜೊತೆಗೆ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶುಕ್ಲಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ, ‘ಅಜಯಗಢ ನಿವಾಸಿ ಸುಶೀಲ್ ಕುಮಾರ್ ಶುಕ್ಲಾ ಅವರು ಮಗಳ
ಹುಟ್ಟುಹಬ್ಬಕ್ಕೆಂದು ಜನವರಿ 4 ರಂದು ಬಹದ್ದೂರ್‌ಗಂಜ್‌ಗೆ ಬಂದಿದ್ದರು ಇದಾದ ಬಳಿಕ ರಾತ್ರಿ ಸುಮಾರು 7.30ಕ್ಕೆ ವಾಪಸ್‌ ತನ್ನ ಊರಿಗೆ ಹೋಗಲು ನಡೆದುಕೊಂಡು ಹೋಗುವ ವೇಳೆ ಪೊಲೀಸ್ ಜೀಪಿನಲ್ಲಿ ಬಂದ ನಾಲ್ವರು ಸಿಬ್ಬಂದಿಗಳು ನನ್ನನ್ನು ಜೀಪಿನಲ್ಲಿ ಬಲವಂತವಾಗಿ ಕೂರಿಸಿ ಅಜಯ್‌ಘಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೆಲ ಸಮಯ ಇರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಈ ವೇಳೆ ನಾನು ಮಗಳ ಹುಟ್ಟುಹಬ್ಬಕ್ಕೆ ಬಂದವನು ನನ್ನ ಊರಿಗೆ ಮರಳಬೇಕಿದೆ ಎಂದೂ ಹೇಳಿದರೂ ಕೇಳದೆ ರಸ್ತೆ ಬದಿ ನಿಲ್ಲಿಸಿದ್ದ ಬೇರೊಬ್ಬರ ಬೈಕ್ ಸಂಖ್ಯೆ ಬರೆದು ಹೆಲ್ಮೆಟ್ ಧರಿಸದೆ ಬೈಕ್ ಸವರಿ ಮಾಡಿದ್ದಕ್ಕೆ 500 ರೂಪಾಯಿ ದಂಡ ಕಟ್ಟಬೇಕು ಎಂದು ಚಲನ್‌ ಬರೆದು ಕೊಟ್ಟಿದ್ದಾರೆ. ಇದಕ್ಕೆ ನನ್ನ ಬಳಿ ಬೈಕ್ ಇಲ್ಲ ನಾನು ನಡೆದುಕೊಂಡು ಬಂದಿರುವುದಾಗಿ ಹೇಳಿದರೂ ಕೇಳದ ಸಿಬ್ಬಂದಿಗಳು ದಂಡ ಕಟ್ಟದಿದ್ದರೆ ಆರು ತಿಂಗಳು ಜೈಲು ವಾಸ ಅನುಭವಿಸಬೇಕಾಗುತ್ತದೆ ಎಂದು ಹೆದರಿಸಿ ಮುನ್ನೂರು ರೂಪಾಯಿ ದಂಡದ ಮೊತ್ತ ಪಡೆದುಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ನೀಡಿದ ಅಜಯಗಢ ಪೊಲೀಸ್ ಠಾಣೆಯ ಪ್ರಭಾರಿ ರವಿ ಜಾದೌನ್, ‘ಹೆಲ್ಮೆಟ್ ಧರಿಸದ ಪಾದಚಾರಿಗಳಿಗೆ ಚಲನ್ ಜಾರಿ ಮಾಡುವ ಸಾಧ್ಯತೆ ಕಡಿಮೆ. ಆದರೂ ಶುಕ್ಲಾ ಅವರು ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಾಗಿದ್ದರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X