ಯುವಕನ ಮೇಲೆ ವೃಂದಾವನ ಆಶ್ರಮದ ಪುರೋಹಿತರಿಂದ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್

Date:

Advertisements

ಮಧ್ಯಪ್ರದೇಶದ ಯುವಕನ ಮೇಲೆ ವೃಂದಾವನದ ಆಶ್ರಮದ ಮುಖ್ಯ ಪುರೋಹಿತರು ಲೈಂಗಿಕ ದೌರ್ಜನ್ಯ ಎಸಗಿ ಅದರ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

2022ರ ನವೆಂಬರ್ 22ರಂದು ಯುವಕ ಆಶ್ರಮದಲ್ಲಿದ್ದಾಗ ಲೈಂಗಿಕ ದೌರ್ಜನ್ಯ ನಡೆದಿದೆ. ‘ಮಹಾಂತ್’ ಎಂದು ಕರೆಯಲ್ಪಡುವ ಪುರೋಹಿತ ತನ್ನ ಮೇಲೆ ದೌರ್ಜನ್ಯ ಎಸಗುವ ಮುನ್ನ ಮಾದಕ ದ್ರವ್ಯ ಬೆರೆಸಿ ಪ್ರಸಾದ ನೀಡಿದ್ದಾನೆ. ಬಳಿಕ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಯುವಕ ಆರೋಪಿಸಿದ್ದಾನೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ದಿನ ಕೇವಲ ಆಚರಣೆ ಮಾತ್ರವಲ್ಲ ಹಿರಿಮೆ

ತನ್ನ ಮೇಲಿನ ಲೈಂಗಿಕ ದೌರ್ಜನ್ಯವನ್ನು ಯುವಕ ವಿರೋಧಿಸಿದಾಗ ಆತನಿಗೆ ಥಳಿಸಲಾಗಿದೆ. ಯುವಕ ಕೊನೆಗೆ ಆಶ್ರಮದಿಂದ ಪರಾರಿಯಾಗಿ ತನ್ನ ಮನೆಗೆ ಮರಳಿದ್ದಾನೆ. ಬಳಿಕ ಈ ಸಂಬಂಧ ದೂರು ನೀಡಿದ್ದಾನೆ ಎಂದು ಹೇಳಲಾಗಿದೆ.

ಆರಂಭದಲ್ಲಿ ಯುವಕ ಗ್ರಾ ವ್ಯಾಪ್ತಿಯ ಪೊಲೀಸ್ ಉಪ ಮಹಾನಿರ್ದೇಶಕ (ಡಿಐಜಿ) ಅವರನ್ನು ಸಂಪರ್ಕಿಸಿದ್ದು, ಅವರು ಮಥುರಾದ ಎಸ್‌ಎಸ್‌ಪಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದರ ನಂತರ, ಎಸ್‌ಎಸ್‌ಪಿ ವೃತ್ತ ಅಧಿಕಾರಿ (ಸದರ್) ಸಂದೀಪ್ ಕುಮಾರ್ ಸಿಂಗ್ ಅವರಿಗೆ ತನಿಖೆ ಜವಾಬ್ದಾರಿ ವಹಿಸಲಾಗಿದೆ.

“ಮಹಂತ್ ವಿರುದ್ಧ ಯುವಕ ಮಾಡಿರುವ ಆರೋಪಗಳು ತುಂಬಾ ಗಂಭೀರವಾಗಿದೆ. ಆದಾಗ್ಯೂ, ಘಟನೆ ಸುಮಾರು ಮೂರು ವರ್ಷಗಳ ಹಿಂದೆ ನಡೆದಿರುವುದಾಗಿ ವರದಿಯಾಗಿರುವುದರಿಂದ, ಈ ವಿಷಯವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X