ಜಮ್ಮು ಮತ್ತು ಕಾಶ್ಮೀರ | 5.4 ತೀವ್ರತೆಯ ಭೂಕಂಪ, ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

Date:

Advertisements
  • ಜಮ್ಮು ಮತ್ತು ಕಾಶ್ಮೀರ ರಾಜ್ಯದ ದೋಡಾದಲ್ಲಿ ನಡುಗಿದ ಭೂಮಿ
  • ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ನಲ್ಲಿ ಕಂಪನ ಅನುಭವ

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮಂಗಳವಾರ (ಜೂನ್‌ 13) 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ.

ಕಂಪನದ ಕೇಂದ್ರ ಬಿಂದು ಜಮ್ಮು-ಕಾಶ್ಮೀರದ ದೋಡಾದಲ್ಲಿ ಪತ್ತೆಯಾಗಿದೆ. ಯಾವುದೇ ರೀತಿಯ ಹಾನಿ ಉಂಟಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

“ಮಧ್ಯಾಹ್ನ 1.33ರ ಸುಮಾರಿಗೆ ಭೂಮಿಯು ನಡುಗಿದ ಅನುಭವವಾಗಿದ್ದು ಜಮ್ಮು ಮತ್ತು ಕಾಶ್ಮೀರದ ರಾಜ್ಯದ ದೋಡಾ ಜಿಲ್ಲೆಯ ಗಂಡೋ ಭಲೆಸ್ಸಾ ಗ್ರಾಮದಲ್ಲಿ ಅದರ ಬಿಂದು ಕಂಡು ಬಂದಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisements

ಭೂಮಿ ಕಂಪನದಿಂದ ಶಾಲೆಗಳಲ್ಲಿ ಮಕ್ಕಳನ್ನು ಭಯಭೀತರನ್ನಾಗಿಸಿತು. ಅಂಗಡಿ, ಮನೆಗಳಲ್ಲಿ ಇದ್ದವರು ಹೊರಗೆ ಓಡಿ ಬಂದರು ಎಂದು ಮಾಧ್ಯಮಗಳು ವರದಿ ಮಾಡಿವೆ.

“ಮಧ್ಯಾಹ್ನ ಭೂಮಿ ನಡುಕದ ಅನುಭವವಾಯಿತು. ಕೂಡಲೇ ನಾವು ಮನೆಯಿಂದ ಓಡಿ ಬಂದೆವು” ಎಂದು ಶ್ರೀನಗರದ ಸ್ಥಳೀಯ ನಿವಾಸಿ ಬಶೀರ್ ಹೇಳಿದ್ದಾರೆ.

“ಹಿಮಾಚಲ ಪ್ರದೇಶ, ಚಂಡೀಗಢ, ಪಂಜಾಬ್‌ ಮತ್ತು ಹತ್ತಿರದ ಪ್ರದೇಶಗಳಲ್ಲಿಯೂ ಭೂಮಿ ಕಂಪಿಸಿದೆ. ಇದು ಲಘು ಪ್ರಮಾಣದ ಕಂಪನವಾಗಿದೆ” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ಒ.ಪಿ. ಮಿಶ್ರಾ ಹೇಳಿದರು.

ಭೂಕಂಪ ಕೇಂದ್ರವು ಈ ಬಗ್ಗೆ ಟ್ವೀಟ್‌ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಲೆ ಹೆಚ್ಚಳ: ಗೋಧಿ ದಾಸ್ತಾನಿಗೆ ಮಿತಿ ಹೇರಿದ ಕೇಂದ್ರ ಸರ್ಕಾರ

ಜಮ್ಮು ಮತ್ತು ಕಾಶ್ಮೀರ ರಾಜ್ಯದಿಂದ ಆಗ್ನೇಯಕ್ಕೆ 30 ಕಿ.ಮೀ ದೂರದ ಕಿಶ್ತ್ವಾರ ಬಳಿ ಭೂಕಂಪ ಉಂಟಾಗಿದೆ ಎಂದು ಐರೋಪ್ಯ ಮೆಡಿಟರೇನಿಯನ್‌ ಭೂಕಂಪ ಕೇಂದ್ರ ತಿಳಿಸಿದೆ.

ಭೂಕಂಪವು 60 ಕಿ.ಮೀ (37.28 ಮೈಲು) ಆಳದಲ್ಲಿತ್ತು. ಇದರ ಕೇಂದ್ರಬಿಂದು ಪಠಾಣ್ಕೊಟ್‌ನಿಂದ ಉತ್ತರಕ್ಕೆ 99 ಕಿ.ಮೀ ದೂರದಲ್ಲಿತ್ತು ಎಂದು ಕೇಂದ್ರ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X