ದೆಹಲಿಯಲ್ಲಿ ತೀವ್ರವಾಗಿ ಕಂಪಿಸಿದ ಭೂಮಿ: ಜನರ ಆತಂಕ

Date:

Advertisements

ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ 4.6 ತೀವ್ರತೆಯಲ್ಲಿ ಪ್ರಬಲವಾಗಿ ಭೂಮಿ ಕಂಪಿಸಿದ್ದು, ಜನರು ಆತಂಕಗೊಂಡಿದ್ದಾರೆ.

ಭೂಮಿ ಕಂಪಿಸುತ್ತಿದ್ದಂತೆ ಜನರು ಭಯಭೀತರಾಗಿ ಓಡಿದ್ದಾರೆ. ಪ್ರಾಥಮಿಕ ಅಂಕಿಅಂಶಗಳ ಪ್ರಕಾರ, ಭೂಕಂಪದ ಕೇಂದ್ರಬಿಂದು ನೇಪಾಳದಲ್ಲಿ 5 ಕಿಮೀ ದೂರದಲ್ಲಿದೆ ಎಂದು ಕಂಡುಬಂದಿದೆ.

ಭೂಮಿಯು ಕಂಪಿಸಿದ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಹಾಗೂ ಮನೆಗಳಲ್ಲಿದ್ದ ಜನರು ಆಚೆಗೆ ಓಡಿ ಬಂದಿದ್ದಾರೆ. ದೆಹಲಿ ಮಾತ್ರವಲ್ಲದೆ ಪಂಜಾಬ್‌, ಹರಿಯಾಣ, ಛತ್ತೀಸ್‌ಗಢದ ಕೆಲ ಭಾಗಗಳಲ್ಲಿಯೂ ಭಕಂಪವಾಗಿದೆ. ಅಲ್ಲದೆ ಉತ್ತರ ಪ್ರದೇಶದ ನೋಯ್ಡಾದಲ್ಲೂ ಕಂಪನವಾಗಿದೆ.

Advertisements

ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ 75 ರ ಭೂಕಂಪನದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.

ಈ ಸುದ್ದಿ ಓದಿದ್ದೀರಾ? ಅಮೆರಿಕ | ಅಕ್ಟೋಬರ್ 14 ರಂದು ಮೇರಿಲ್ಯಾಂಡ್‌ನಲ್ಲಿ ಡಾ. ಬಿ ಆರ್ ಅಂಬೇಡ್ಕರ್‌ರ ಬೃಹತ್ ಪುತ್ಥಳಿ ಅನಾವರಣ

ಉತ್ತರ ಪ್ರದೇಶದ ಲಖನೌ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪನದ ಅನುಭವವಾದ ತಕ್ಷಣ ಜನರು ಕಟ್ಟಡಗಳಿಂದ ಹೊರಗೆ ಬಂದು ನಿಂತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಂಡುಬಂದಿದೆ.

ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ದೆಹಲಿ ಪೊಲೀಸರು, “ನಾಗರಿಕರೆ, ನೀವೆಲ್ಲರೂ ಸುರಕ್ಷಿತವಾಗಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ದಯವಿಟ್ಟು ನಿಮ್ಮ ಕಟ್ಟಡಗಳಿಂದ ಸುರಕ್ಷಿತ ಸ್ಥಳಕ್ಕೆ ಬನ್ನಿ. ಆದರೆ ಭಯಪಡಬೇಡಿ. ಎಲಿವೇಟರ್‌ಗಳನ್ನು ಬಳಸಬೇಡಿ! ಯಾವುದೇ ತುರ್ತು ಸಹಾಯಕ್ಕಾಗಿ, 112 ಅನ್ನು ಡಯಲ್ ಮಾಡಿ” ಎಂದಿದ್ದಾರೆ.

ಭಾನುವಾರ, ಹರ್ಯಾಣದ ಕೆಲವು ಭಾಗಗಳಲ್ಲಿ ಲಘು ಭೂಕಂಪನ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭಾನುವಾರ ರಾತ್ರಿ 11.26 ಕ್ಕೆ 2.6 ತೀವ್ರತೆಯಲ್ಲಿ ಭೂಕಂಪಿಸಿದೆ. ಈ ಭೂಕಂಪನದ ಕೇಂದ್ರಬಿಂದು ಹರ್ಯಾಣದ ರೋಹ್ಟಕ್‌ನ ಪೂರ್ವ ಆಗ್ನೇಯದ 7 ಕಿಮೀ ದೂರದಲ್ಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X