ಕುಂಭ ಮೇಳದಲ್ಲಿ ಗಾಯಗೊಂಡವರಿಗೆ ಮುಸ್ಲಿಂ ಸಮುದಾಯದಿಂದ ನೆರವು; ಮಸೀದಿಗಳಲ್ಲಿ ಆಶ್ರಯ

Date:

Advertisements

ಕುಂಭ ಮೇಳದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ ಮತ್ತು ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಿರುವ ಹೊರತಾಗಿಯೂ ಆ ಸಮುದಾಯ ಮಾನವೀಯತೆ ಮತ್ತು ಕೋಮು ಸೌಹಾರ್ದತೆಯ ಕಾರ್ಯದಲ್ಲಿ ತೊಡಗಿಕೊಂಡಿದೆ. ಇದಕ್ಕೆ ಪ್ರಯಾಗ್‌ರಾಜ್‌ ಹಾಗೂ ಅಲಹಾಬಾದ್‌ನ ಎರಡು ಘಟನೆಗಳು ಸಾಕ್ಷಿಯಾಗಿದೆ.

ಪ್ರಯಾಗ್‌ರಾಜ್‌ನಲ್ಲಿರುವ ಮುಸ್ಲಿಂ ಸಮುದಾಯವು ಕುಂಭ ಮೇಳದಲ್ಲಿ ಗಾಯಗೊಂಡ ಭಕ್ತರಿಗೆ ಸಹಾಯ ಮಾಡಲು ಮುಂದಾಗಿದೆ. ಮೌನಿ ಅಮವಾಸ್ಯೆಯಂದು ಕಾಲ್ತುಳಿತದ ನಂತರ ಗಾಯಗೊಂಡ, ತೊಂದರೆಗೊಳಗಾದ ಯಾತ್ರಾರ್ಥಿಗಳಿಗೆ ಆಹಾರ, ವಸತಿ ಮತ್ತು ವೈದ್ಯಕೀಯ ಸಹಾಯವನ್ನು ಒದಗಿಸುತ್ತಿದೆ. ಅಗತ್ಯವಿರುವವರಿಗೆ ನೆರವು ನೀಡಲು ಅವರು ತಮ್ಮ ಮನೆಗಳು, ಮಸೀದಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ತೆರೆದಿದ್ದಾರೆ.

ಗಾಯಗೊಂಡ ಭಕ್ತರಿಗೆ ಆಹಾರ, ನೀರು, ಬಟ್ಟೆ, ಔಷಧಿ, ಮತ್ತು ಆಶ್ರಯವನ್ನು ನೀಡುತ್ತಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋಗಳು ಪ್ರಸಾರವಾಗುತ್ತಿವೆ.

Advertisements

“ನಂಬಿಕೆ ಮತ್ತು ಮಾನವೀಯತೆಗೆ ಎಂದಿಗೂ ರಾಜಿ ಮಾಡಿಕೊಳ್ಳಬಾರದು. ಭಕ್ತರು ನಮ್ಮ ನಗರದ ಅತಿಥಿಗಳು ಮತ್ತು ಅವರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯ” ಎಂದು ಸಮುದಾಯದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ನ ಇನ್ನೊಂದು ಘಟನೆಯಲ್ಲಿ ಮುಸ್ಲಿಂ ಸಮುದಾಯದವರು ಕುಂಭಮೇಳಕ್ಕೆ ಆಗಮಿಸುವ ಭಕ್ತರಿಗೆ ಆಶ್ರಯ ಸೇರಿದಂತೆ ಹಲವು ರೀತಿಯ ನೆರವು ನೀಡಿದ್ದಾರೆ. ಮುಸ್ಲಿಂ ಸಮುದಾಯ ನೆರವು ನೀಡಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

https://twitter.com/tanmoyofc/status/1885161530926194701?mx=2

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X