ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

Date:

Advertisements

ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ 2023ರ ಆಗಸ್ಟ್ 31 ರವರೆಗೆ ಒಟ್ಟು 685 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಭಾಗೀಯ ಆಯುಕ್ತರ ಅಧಿಕೃತ ವರದಿಯು ತಿಳಿಸಿದೆ.

ವಿಶೇಷ ಏನೆಂದರೆ, ಮಹಾರಾಷ್ಟ್ರದ ಕೃಷಿ ಸಚಿವ ಧನಂಜಯ್ ಮುಂಡೆ ಅವರ ತವರು ಜಿಲ್ಲೆ ಬೀಡ್‌ನಲ್ಲಿ ಅತಿ ಹೆಚ್ಚು, ಅಂದರೆ 186 ಮಂದಿ, ರೈತರು ಸಾವನ್ನಪ್ಪಿದ್ದಾರೆ.

ಇಲ್ಲಿನ ವಿಭಾಗೀಯ ಆಯುಕ್ತರ ಕಚೇರಿಯ ವರದಿಯ ಪ್ರಕಾರ, ಈ ಪ್ರದೇಶದಲ್ಲಿ 2023 ರ ಜನವರಿ 1 ರಿಂದ ಆಗಸ್ಟ್ 31 ರ ನಡುವೆ 685 ಸಾಗುವಳಿದಾರರು ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ ಮತ್ತು ಈ ಪೈಕಿ 294 ಸಾವುಗಳು ಜೂನ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಸಂಭವಿಸಿವೆ.

ಅತಿ ಹೆಚ್ಚು ರೈತರ ಆತ್ಮಹತ್ಯೆಗಳು, ಅಂದರೆ 186 ಮಂದಿ, ಬೀಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೀಡ್ ಬಂಡಾಯ ಎನ್‌ಸಿಪಿ ನಾಯಕ ಮುಂಡೆ ಅವರ ತವರು ಜಿಲ್ಲೆ. ಅವರು ಜುಲೈ 2 ರಂದು ಕ್ಯಾಬಿನೆಟ್ ಸಚಿವರಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಸೇರಿದರು. ನಂತರ ಅವರಿಗೆ ಕೃಷಿ ಖಾತೆಯನ್ನು ನೀಡಲಾಯಿತು.

ಈ ಸುದ್ದಿ ಓದಿದ್ದೀರಾ: ʼಒಂದು ರಾಷ್ಟ್ರ,ಒಂದು ಚುನಾವಣೆ’ ಪರಿಕಲ್ಪನೆಯ ಆಳದಲ್ಲಿ ಚುನಾವಣಾ ಪ್ರಜಾಪ್ರಭುತ್ವದ ಬಗೆಗಿನ ತಿರಸ್ಕಾರ ಭಾವ ಅಡಗಿದೆ

ಮಧ್ಯ ಮಹಾರಾಷ್ಟ್ರದ ಬಯಲು ಸೀಮೆಯು, ಔರಂಗಾಬಾದ್, ಜಲ್ನಾ, ಬೀಡ್, ಪರ್ಭಾನಿ, ನಾಂದೇಡ್, ಒಸ್ಮಾನಾಬಾದ್, ಹಿಂಗೋಲಿ ಮತ್ತು ಲಾತೂರ್ ಹೀಗೆ.ಎಂಟು ಜಿಲ್ಲೆಗಳನ್ನು ಒಳಗೊಂಡಿದೆ.

ಬೀಡ್ ಜಿಲ್ಲೆಯ ನಂತರ ಉಸ್ಮಾನಾಬಾದ್‌ನಲ್ಲಿ 113 ರೈತರು, ನಾಂದೇಡ್‌ನಲ್ಲಿ 110 ರೈತರು, ಔರಂಗಾಬಾದ್‌ನಲ್ಲಿ 95 ರೈತರು, ಪರ್ಭಾನಿಯಲ್ಲಿ 58 ರೈತರು, ಲಾತೂರ್‌ನಲ್ಲಿ 51 ರೈತರು, ಜಲ್ನಾದಲ್ಲಿ 50 ರೈತರು ಮತ್ತು ಹಿಂಗೋಲಿಯಲ್ಲಿ 22 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X