ಪುಣೆಯಲ್ಲಿ ಭಾರಿ ಮಳೆ: ವಿದ್ಯುತ್ ಸ್ಪರ್ಶದಿಂದ ಮೂವರು ಸಾವು

Date:

Advertisements

ಮಹಾರಾಷ್ಟ್ರದ ಪುಣೆ ಮತ್ತು ಕೊಲ್ಹಾಪುರದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದು, ವಿದ್ಯುತ್ ಸ್ಪರ್ಶದಿಂದ ಮೂವರು ಸಾವಿಗೀಡಾಗಿದ್ದಾರೆ.

ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತವಾಗಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ.

Advertisements

ಪುಣೆ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದ್ದು ಈಗಾಗಲೇ 35,000 ಕ್ಯುಸೆಕ್‌ಗಿಂತ ಹೆಚ್ಚು ನೀರು ಬಿಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಮಳೆಯಿಂದಾಗಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗುತ್ತಿರುವ ಕಾರಣ ನದಿಗೆ ಬಿಡುವ ನೀರಿನ ಪ್ರಮಾಣ 45,000 ಕ್ಯೂಸೆಕ್‌ಗೆ ಹೆಚ್ಚಲಿದೆ. ಇದರಿಂದಾಗಿ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುಣೆ ಮಹಾನಗರ ಪಾಲಿಕೆ ಹೇಳಿದೆ.

ಮಳೆ ಹೆಚ್ಚಾಗಿರುವ ಕಾರಣ ಏರ್‌ ಇಂಡಿಯಾ ಮಾರ್ಗಸೂಚಿಯನ್ನು ಪ್ರಕಟಿಸಿದ್ದು,ಮುಂಬೈಗೆ ತೆರಳುವ ವಿಮಾನಗಳು ತಡವಾಗಬಹುದು. ಇಂದು ಪ್ರಯಾಣಿಸುವ ಪ್ರಯಾಣಿಕರಿಗೆ ವೇಳಾಪಟ್ಟಿ ಬದಲಾವಣೆ ಅಥವಾ ಹಣ ಮರುಪಾವತಿ ಆಯ್ಕೆಯನ್ನು ನೀಡಲಾಗಿರುವುದಾಗಿ ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಇತರ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ಸ್ಪೇಸ್‌ಜೆಟ್ ಸೇರಿದಂತೆ ಹಲವು ಸಂಸ್ಥೆಗಳು ವಿಮಾನ ತಡವಾಗುವ ಬಗ್ಗೆ ಸೂಚನೆಗಳನ್ನು ನೀಡಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X