8 ಲಕ್ಷ ಮಹಿಳೆಯರ ಸ್ಟೈಪೆಂಡ್‍ಗೆ ಕತ್ತರಿ ಹಾಕಿದ ಮಹಾರಾಷ್ಟ್ರ ಸರ್ಕಾರ

Date:

Advertisements

ಮಹಾಯುತಿ ಸರ್ಕಾರದ ಪ್ರಮುಖ ಯೋಜನೆಯಾದ ಮುಖ್ಯಮಂತ್ರಿ ಮಾಜ್ಹಿ ಲಡ್ಕಿ ಬಹಿನ್ ಯೋಜನೆಯ ಎಂಟು ಲಕ್ಷ ಫಲಾನುಭವಿಗಳು ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ(ಎನ್‍ಎಸ್‍ಎಂಎನ್) ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಕಾರಣ ನೀಡಿ ಅವರ ಸ್ಟೈಪೆಂಡ್‍ಗೆ ಮಹಾರಾಷ್ಟ್ರ ಸರ್ಕಾರ ಕತ್ತರಿ ಹಾಕಿದೆ.

ಎಂಟು ಲಕ್ಷ ಮಹಿಳೆಯರು ಮಾಸಿಕವಾಗಿ ಪಡೆಯುತ್ತಿದ್ದ 1,500 ರೂಪಾಯಿಗಳ ಬದಲು ಇನ್ನು ಮುಂದೆ ಕೇವಲ 500 ರೂಪಾಯಿ ಪಡೆಯಲಿದ್ದಾರೆ.ಈ ಫಲಾನುಭವಿಗಳು ಈಗಾಗಲೇ ಎನ್‍ಎಸ್‍ಎಂಎನ್ ಯೋಜನೆಯಡಿ ಮಾಸಿಕ 1,000 ರೂಪಾಯಿ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ಹೇಳಿದೆ. ಲಡ್ಕಿ ಬಹಿನ್ ಯೋಜನೆಯಡಿ ಫಲಾನುಭವಿಗಳು ಇತರ ಸರ್ಕಾರಿ ಸೌಲಭ್ಯವನ್ನು ಪಡೆಯುವ ಅರ್ಹತೆ ಹೊಂದಿದ್ದು, ಗರಿಷ್ಠ ಮಾಸಿಕ 1,500 ರೂಪಾಯಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರ ಬಂದೂಕಿನ ನ್ಯಾಯ ಸಮಾಜಕ್ಕೆ ಮಾರಕ

Advertisements

ಈ ಯೋಜನೆಯಡಿ ಸೌಲಭ್ಯ ಪಡೆಯುವ ಮಾನದಂಡವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕ್ರಮವಾಗಿ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಕಳೆದ ಅಕ್ಟೋಬರ್ ನಲ್ಲಿ 2.63 ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದರು. ಇದರ ಪರಿಶೀಲನೆ ನಡೆಸಿ 11 ಲಕ್ಷ ಮಂದಿಯನ್ನು ಕಿತ್ತುಹಾಕಿ 2.52 ಕೋಟಿ ಮಂದಿಗೆ ಫೆಬ್ರವರಿ ವೇಳೆ ಸ್ಟೈಪಂಡ್ ನೀಡಲಾಗುತ್ತಿತ್ತು. ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಫಲಾನುಭವಿಗಳ ಸಂಖ್ಯೆ 2.46 ಲಕ್ಷಕ್ಕೆ ಇಳಿದಿದೆ.

ಪರಿಶೀಲನೆ ಪ್ರಕ್ರಿಯೆ ಬಳಿಕ 10-15 ಲಕ್ಷ ಫಲಾನುಭವಿಗಳು ಕಡಿಮೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿಕೆ ನೀಡಿದ್ದರು.ನೆರವು ಪಡೆಯಲು ಮಾನದಂಡವನ್ನು ಬದಲಿಸಿಲ್ಲ. ಆದರೆ ಅರ್ಹರು ಮಾತ್ರ ಪಡೆಯುವಂತೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X