ಮಹಾರಾಷ್ಟ್ರ | ‘ಸಮೃದ್ಧಿ ಎಕ್ಸ್‌ಪ್ರೆಸ್‌ ವೇ’ನಲ್ಲಿ ಭೀಕರ ಅಪಘಾತ; ಏಳು ಮಂದಿ ಸಾವು

Date:

Advertisements

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ‘ಸಮೃದ್ಧಿ ಎಕ್ಸ್‌ಪ್ರೆಸ್‌ ವೇ’ ಎಂದೂ ಕರೆಯಲ್ಪಡುವ ‘ಮುಂಬೈ-ನಾಗಪುರ ಎಕ್ಸ್‌ಪ್ರೇಸ್‌ ವೇ’ನಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆಕೊಂಡಿರುವ ಪರಿಣಾಮ ಎಳು ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಡವಂಚಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೃತರಾದವರು ಮುಂಬೈ ಮತ್ತು ಬುಲ್ಧಾನ ಜಿಲ್ಲೆಯ ಮಲಾಡ್‌ (ಪೂರ್ವ) ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

“ನಾಗ್‌ಪುರದಿಂದ ಮುಂಬೈಗೆ ಹೋಗುತ್ತಿದ್ದ ಮಲ್ಟಿ-ಯುಟಿಲಿಟಿ ವೆಹಿಕಲ್ (ಎಮ್‌ಯುವಿ) ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

ಅಪಘಾತದಲ್ಲಿ ಎಂಯುವಿ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ರಸ್ತೆಯ ಎಡಭಾಗದಲ್ಲಿ ಬಿದ್ದಿದೆ. ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನಗಳ ಜಖಂಗೊಂಡ ಅವಶೇಷಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸಿದರು ಎಂದು ಅವರು ಹೇಳಿದ್ದಾರೆ.

ಆರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ತರಲಾಗಿದೆ. ಮೂವರು ಗಾಯಗೊಂಡ ವ್ಯಕ್ತಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜಿಎಂಸಿಎಚ್) ಸ್ಥಳಾಂತರಿಸಲಾಗಿದ್ದ ಓರ್ವ ಗಂಭೀರ ಗಾಯಗೊಂಡ ವ್ಯಕ್ತಿ ನಂತರ ಸಾವನ್ನಪ್ಪಿದ್ದಾರೆ ಎಂದು ಜಲ್ನಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಉಮೇಶ್ ಜಾಧವ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಮೃತರಲ್ಲಿ ಮೂವರು ಮುಂಬೈ ಮೂಲದವರಾಗಿದ್ದರೆ, ಇನ್ನು ಹಲವರು ಬುಲ್ಧಾನ ಜಿಲ್ಲೆಯವರಾಗಿದ್ದಾರೆ. ಛತ್ರಪತಿ ಸಂಭಾಜಿನಗರಕ್ಕೆ ಸ್ಥಳಾಂತರಗೊಂಡಿರುವ ಒಬ್ಬ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡಿರುವ ಮೂವರು ಮುಂಬೈ ಮೂಲದವರು ಎಂದು ಅವರು ತಿಳಿಸಿದ್ದಾರೆ.

ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಆರು ಲೇನ್ ಎಕ್ಸ್‌ಪ್ರೆಸ್‌ವೇ ಆಗಿದೆ. ನಾಗ್‌ಪುರದಿಂದ ಶಿರಡಿಗೆ ಸಂಪರ್ಕಿಸುವ ಹೆದ್ದಾರಿಯ ಮೊದಲ ಹಂತವನ್ನು ಡಿಸೆಂಬರ್ 2022ರಲ್ಲಿ ಉದ್ಘಾಟಿಸಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X