ತನ್ನ ಅನುಯಾಯಿಗಳಿಗೆ ಹೊಡೆದು, ಮೂತ್ರ ಕುಡಿಸುವ ಮಹಾರಾಷ್ಟ್ರದ ‘ಸ್ವಯಂ ಘೋಷಿತ ಬಾಬಾ’

Date:

Advertisements

‘ಸ್ವಯಂ ಘೋಷಿತ ಬಾಬಾ’ ಒಬ್ಬ ಆಧ್ಯಾತ್ಮಿಕ ಚಿಕಿತ್ಸೆ ನೀಡುವ ನೆಪದಲ್ಲಿ ಗ್ರಾಮಸ್ಥರನ್ನು ಕ್ರೂರವಾಗಿ ಥಳಿಸಿ, ಆತನ ಮೂತ್ರ ಕುಡಿಸುತ್ತಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಸಂಜಯ್ ಪಗಾರೆ ಎಂಬ ಈ ಸ್ವಯಂ ಘೋಷಿತ ಬಾಬಾ ಸುಮಾರು ಎರಡು ವರ್ಷಗಳಿಂದ ವೈಜಾಪುರ ತಹಸಿಲ್‌ನ ಶಿಯೂರ್ ಗ್ರಾಮದ ದೇವಸ್ಥಾನದಲ್ಲಿ ಈ ಮೌಢ್ಯ ಮತ್ತು ಹಿಂಸೆಯನ್ನು ನಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

ಸಂಜಯ್ ಪಗಾರೆ ತನಗೆ ಅಲೌಕಿಕ ಶಕ್ತಿಗಳಿವೆ ಎಂದು ಹೇಳಿಕೊಂಡಿದ್ದಾನೆ. ತಾನು ಆತ್ಮಗಳನ್ನು ಓಡಿಸಬಲ್ಲೆ, ಅವಿವಾಹಿತರಿಗೆ ಮದುವೆ ಮಾಡಿಸಬಲ್ಲೆ, ಅಘೋರಿ ಆಚರಣೆಗಳ ಮೂಲಕ ದಂಪತಿಗಳು ಮಕ್ಕಳನ್ನು ಪಡೆಯಲು ಸಹಾಯ ಮಾಡಬಲ್ಲೆ ಎಂದು ಗ್ರಾಮಸ್ಥರನ್ನು ನಂಬಿಸಿದ್ದಾನೆ ಎನ್ನಲಾಗಿದೆ.

ಪುರುಷರು ಮತ್ತು ಮಹಿಳೆಯರು- ಎಲ್ಲರಿಗೂ ಕೋಲುಗಳಿಂದ ಹೊಡೆಯುತ್ತಿದ್ದ ಈತ, ತನ್ನ ಬೂಟುಗಳನ್ನು ತನ್ನ ಅನುಯಾಯಿಗಳ ಬಾಯಿಗೆ ತುರುಕುತ್ತಿದ್ದ. ದೇವಾಲಯದ ಸುತ್ತಲೂ ವೃತ್ತಾಕಾರದಲ್ಲಿ ಓಡಲು ಹೇಳುತ್ತಿದ್ದ. ಚಿಕಿತ್ಸೆಯೆಂದು ಹೇಳಿ ಯಾವುದೋ ಮರದ ಎಲೆಗಳನ್ನು ತಿನ್ನಿಸುತ್ತಿದ್ದ. ತನ್ನ ಮೂತ್ರವನ್ನು ಕುಡಿಸುತ್ತಿದ್ದ, ಇದು ಆಧ್ಮಾತ್ಮಿಕ ಚಿಕಿತ್ಸೆಯ ಭಾಗ ಎಂದು ಹೇಳಿಕೊಳ್ಳುತ್ತಿದ್ದ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

ಮೌಢ್ಯ ವಿರೋಧಿ ಸಂಘಟನೆಯ ಕಾರ್ಯಕರ್ತರು ಗುಪ್ತ ಕ್ಯಾಮೆರಾಗಳನ್ನು ಬಳಸಿ ಈತನ ಈ ಕ್ರೂರ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಒಂದು ವೀಡಿಯೊದಲ್ಲಿ, ಬಾಬಾ ನೆಲದ ಮೇಲೆ ಮಲಗಿರುವ ವ್ಯಕ್ತಿಯ ಮುಖದ ಮೇಲೆ ನಡೆದಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸದ್ಯ ಮೌಢ್ಯ ವಿರೋಧಿ ಸಂಘಟನೆಯ ಕಾರ್ಯಕರ್ತರ ದೂರಿನ ಆಧಾರದಲ್ಲಿ ಭಾರತೀಯ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ. ವಂಚನೆ, ಹಲ್ಲೆ ಮತ್ತು ಮೌಢ್ಯ ಪ್ರಚಾರಕ್ಕಾಗಿ ಸಂಜಯ್ ಪಗಾರೆ ವಿರುದ್ಧ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X