ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

Date:

Advertisements
  • ಜಲಗಾಂವ್‌ ಜಿಲ್ಲೆಯಲ್ಲಿ ಶಿವಸೇನೆ ಸಮಾವೇಶದಲ್ಲಿ ಸಂಜಯ್‌ ರಾವುತ್ ಭಾಷಣ
  • ಶಿಂಧೆ ಸರ್ಕಾರದ ಒಳಗೆ ಮುಖ್ಯಮಂತ್ರಿ ಬದಲಾವಣೆಗೆ ಮಸಲತ್ತು ಆರೋಪ

ಮಹಾರಾಷ್ಟ್ರದಲ್ಲಿರುವ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಸರ್ಕಾರ ಇನ್ನು 15 ದಿನದಲ್ಲಿ ಅಂತ್ಯವಾಗಲಿದೆ ಎಂದು ಉದ್ಧವ್‌ ಠಾಕ್ರೆ ನೇತೃತ್ವ ಶಿವಸೇನಾ (ಯುಬಿಟಿ) ವಕ್ತಾರ ಸಂಜಯ್‌ ರಾವುತ್ ಹೇಳಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯಲ್ಲಿ ಭಾನುವಾರ (ಏಪ್ರಿಲ್‌ 23) ನಡೆದ ಪಕ್ಷದ ಸಮಾವೇಶದಲ್ಲಿ ರಾವುತ್‌ ಸುದ್ದಿಗಾರರಿಗೆ ಹೇಳಿದರು.

“ಶಿಂಧೆ ಸರ್ಕಾರಕ್ಕೆ ಮರಣ ಶಾಸನ ಬರೆಯುತ್ತೇವೆ. ಇನ್ನು 15 ದಿನದಲ್ಲಿ ಅವರ ಸರ್ಕಾರ ಕೊನೆಗೊಳ್ಳಲಿದೆ” ಎಂದು ಶಿವಸೇನಾದ ಸಂಜಯ್‌ ರಾವುತ್‌ ಸಮಾವೇಶದ ವೇಳೆ ಸುದ್ದಿಗಾರರಿಗೆ ಹೇಳಿದರು.

Advertisements

“ಸುಪ್ರೀಂಕೋರ್ಟ್‌ ತೀರ್ಪು ಹೊರಬೀಳಲಿದ್ದು, ಶಿಂಧೆ ಅವರ ಸರ್ಕಾರ ಪತನಗೊಳ್ಳಲಿದೆ” ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಮುಖ್ಯಮಂತ್ರಿ ಶಿಂಧೆಗೆ ಬಿಜೆಪಿಯು ಗಂಟು ಮೂಟೆ ಕಟ್ಟಿಕೊಳ್ಳಲು ಹೇಳಿದೆ ಎಂದು ಶನಿವಾರ (ಏಪ್ರಿಲ್‌ 22) ಸಂಜಯ್‌ ರಾವುತ್‌ ಹೇಳಿದ್ದರು.

ಮುಖ್ಯಮಂತ್ರಿ ಹುದ್ದೆ ಮೇಲೆ ಹಕ್ಕು ಸಾಧಿಸಲು ತಾವು ಸಿದ್ಧ ಎಂದು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಹೇಳಿಕೆಗೆ ಸಂಜಯ್‌ ರಾವುತ್‌ ಪ್ರತಿಕ್ರಿಯಿಸಿದ್ದರು.

“2024ರಲ್ಲಿ ಮಾತ್ರವಲ್ಲ, ನಾನು ಈಗಲೂ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಸಿದ್ಧನಿದ್ದೇನೆ” ಎಂದು ಅಜಿತ್‌ ಪವಾರ್‌ ಪಿಂಪ್ರಿ ಚಿಂಚವಾಡದಲ್ಲಿ ಶುಕ್ರವಾರ ಮಾಧ್ಯಮ ಸಂದರ್ಶನದಲ್ಲಿ ಹೇಳಿದ್ದರು.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆ ಭಾನುವಾರ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಎರಡು ಬಣಗಳ ಸಮಾವೇಶಗಳಿಗೆ ಸಾಕ್ಷಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಕೇರಳ | ಅಲ್ಪಸಂಖ್ಯಾತರ ಮೇಲಿನ ಸಂಘ ಪರಿವಾರದ ದಾಳಿ ಬಗ್ಗೆ ವ್ಯಾಪಕ ಪ್ರಚಾರಕ್ಕೆ ಕಾಂಗ್ರೆಸ್‌ ಸಿದ್ಧತೆ

ಉದ್ಧವ್ ಅವರ ಶಿವಸೇನಾದ ಸಮಾವೇಶಕ್ಕೆ ಅಡಚಣೆ ಉಂಟುಮಾಡುವುದಾಗಿ ನೀರು ಪೂರೈಕೆ ಸಚಿವ ಗುಲಾಬ್‌ರಾವ್‌ ಪಾಟೀಲ್ ಹೇಳಿದ್ದರು. ಸಚಿವ ಗುಲಾಬ್‌ರಾವ್‌ ವಿರುದ್ಧ ಭಷ್ಟಾಚಾರ ಆರೋಪವಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X