‘ಕೊಳಕು ಪ್ರಶ್ನೆ’ ಕೇಳಿದರೆಂದು ವಿಚಾರಣೆಯಿಂದ ಸಿಡಿದೆದ್ದು ಹೊರ ನಡೆದ ಸಂಸದೆ ಮಹುವಾ ಮೊಯಿತ್ರಾ

Date:

Advertisements

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

ಸಭೆಯಿಂದ ಅರ್ಧದಲ್ಲೇ ಹೊರ ನಡೆದಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, ತೀರಾ ವೈಯಕ್ತಿಕ ಮತ್ತು ಅನೈತಿಕ ಪ್ರಶ್ನೆಗಳನ್ನು ಕೇಳಿದ್ದಾರೆ. ಇದರಿಂದಾಗಿ ಅರ್ಧದಲ್ಲೇ ಹೊರಬಂದಿರುವುದಾಗಿ ಆಕ್ರೋಶ ಹೊರ ಹಾಕಿದ್ದಾರೆ.

ಸಭೆಯಿಂದ ಹೊರ ನಡೆದ ಆಕ್ರೋಶ ಹೊರ ಹಾಕಿದ ಸಂಸದೆ, ಇದು ಕೂಡ ಒಂದು ನೈತಿಕ ಸಮಿತಿಯೇ? ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು ಕೇಳಲು ಇವರಿಗೆ ಹಕ್ಕಿದೆಯಾ? ಇದು ಯಾವ ರೀತಿಯ ಸಭೆ? ಎಲ್ಲ ರೀತಿಯ ಹೊಲಸು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆಕ್ರೋಶ ಹೊರಹಾಕಿದ್ದಾರೆ.

Advertisements

ಲೋಕಸಭೆಯ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದ ವಿಪಕ್ಷಗಳ ಎಲ್ಲ ಸಂಸದರು ಕೂಡ ಅರ್ಧದಲ್ಲೇ ಹೊರಬಂದಿದ್ದು, ಅವರು ಕೂಡ ಆಕ್ರೋಶ ಹೊರಹಾಕಿದ್ದಾರೆ.

ಬಳಿಕ ಮಾತನಾಡಿದ ಜನತಾ ದಳ (ಯುನೈಟೆಡ್) ಸಂಸದ ಗಿರಿಧಾರಿ ಯಾದವ್, “ಅವರು ಮಹಿಳೆಗೆ (ಟಿಎಂಸಿ ಸಂಸದ ಮಹುವಾ ಮೊಯಿತ್ರಾ) ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದರು. ಅವರಿಗೆ ವೈಯಕ್ತಿಕ ಪ್ರಶ್ನೆಗಳನ್ನು ಕೇಳುವ ಹಕ್ಕಿಲ್ಲ. ಆದ್ದರಿಂದ ನಾವು ಹೊರನಡೆದಿದ್ದೇವೆ” ಎಂದು ಹೇಳುತ್ತಾರೆ.

ಕಾಂಗ್ರೆಸ್ ಸಂಸದ ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, “ಸಂಸತ್ತಿನ ನೈತಿಕ ಸಮಿತಿ ಅಧ್ಯಕ್ಷರ ಇಡೀ ಪ್ರಶ್ನೆಗಳನ್ನು ಗಮನಿಸುವಾಗ, ಯಾರದೋ ಆಜ್ಞೆಯ ಮೇರೆಗೆ ವರ್ತಿಸುತ್ತಿದ್ದಾರೆ ಎಂದು ತೋರುತ್ತದೆ. ಇದು ತುಂಬಾ ಕೆಟ್ಟದು, ಎರಡು ದಿನಗಳಿಂದ ನಾವು ಅವರಿಗೆ, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳು ಎಲ್ಲಿವೆ ಎಂದು ಕೇಳಿದ್ದೇವಾದರೂ ಅದನ್ನು ಅವರು ಒದಗಿಸಿಲ್ಲ. ಅವರಲ್ಲಿ ಯಾವುದೇ ನಗದು ವರ್ಗಾವಣೆಗೆ ಸಂಬಂಧಿಸಿದ ಯಾವುದೇ ಪುರಾವೆಗಳಿಲ್ಲ’ ಎಂದು ತಿಳಿಸಿದ್ದಾರೆ.

ಯಾವ ರೀತಿಯ ಪ್ರಶ್ನೆಗಳನ್ನು ಕೇಳಿದರು ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ಸಂಸದ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ, ಮಹುವಾ ಮೊಯಿತ್ರಾ ಅವರಲ್ಲಿ ನೀವು ಎಲ್ಲಿಗೆಲ್ಲ ಪ್ರಯಾಣಿಸುತ್ತೀರಾ? ನೀವು ಯಾರನ್ನೆಲ್ಲ ಭೇಟಿಯಾಗುತ್ತೀರಾ? ನಿಮ್ಮ ಫೋನ್ ದಾಖಲೆಗಳನ್ನು ನಮಗೆ ನೀಡಬಹುದೇ? ನೀವು ಏನೆಲ್ಲ ಮಾತನಾಡುತ್ತೀರಾ? ಎಷ್ಟು ಹೊತ್ತು ಮಾತನಾಡ್ತೀರಾ? ಹೋಟೆಲಿನಲ್ಲಿ ಯಾರೊಂದಿಗೆ ವಾಸ ಮಾಡಿದ್ರಿ? ಯಾರು ಹೋಟೆಲ್ ಬಿಲ್ ಕೊಟ್ಟರು? ಎಂಬಿತ್ಯಾದಿ ಮಹಿಳೆಗೆ ಕೇಳಬಾರದ ಪ್ರಶ್ನೆಗಳನ್ನು ಕೇಳಿದ್ದಾರೆ. ಇದು ತೀರಾ ವೈಯಕ್ತಿಕ ಮತ್ತು ಕೊಳಕು ಪ್ರಶ್ನೆಗಳು. ಮಹಿಳೆಗೆ ಈ ರೀತಿ ಕೇಳಲು ಈ ಸಮಿತಿಗೆ ಹಕ್ಕಿದೆಯಾ? ಎಂದು ಪ್ರಶ್ನಿಸಿದರು. ಹಾಗಾಗಿಯೇ, ವಿಪಕ್ಷಗಳ ಎಲ್ಲ ಸಂಸದರು ಸಭೆಯಿಂದ ಹೊರ ನಡೆದಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮಹುವಾ ಮೊಯಿತ್ರಾ ವಿರುದ್ಧ ಮಾಡಿದ ಲಂಚದ ಆರೋಪದ ಬಗ್ಗೆ ಲೋಕಸಭೆಯ ನೈತಿಕ ಸಮಿತಿ ತನಿಖೆ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮೊಯಿತ್ರಾ ಇಂದು ಸಮಿತಿಯ ಮುಂದೆ ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X