ಮೋಹನ್ ಭಾಗವತ್‌ರನ್ನು ಬಂಧಿಸಿ ಕರೆತನ್ನಿ ಎಂಬ ಆದೇಶವಿತ್ತು, ನಾನು ಪಾಲಿಸಲಿಲ್ಲ: ಮುಜಾವರ್

Date:

Advertisements

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ ಭಾಗವತ್ ಅವರನ್ನು ಬಂಧಿಸುವಂತೆ ಸೂಚನೆ ಇತ್ತು ಎಂದು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿ ಮೆಹಬೂಬ್‌ ಮುಜಾವರ್‌ ಹೇಳಿದ್ದಾರೆ.

2008ರ ಸೆ. 29ರಂದು ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದ್ದರ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಈ ಪ್ರಕರಣದ ಹಿಂದೆ ಕೇಸರಿ ಭಯೋತ್ಪಾದನೆ ಇತ್ತು ಎಂಬುದನ್ನು ಸಾಬೀತುಪಡಿಸುವ ಉದ್ದೇಶವಿತ್ತು. ಸುಳ್ಳು ಕಥೆಗಳನ್ನು ಎಟಿಎಸ್ ಹೆಣೆದಿದೆ ಎಂದು ನ್ಯಾಯಾಲಯ ಹೇಳಿದೆ’ ಎಂದಿದ್ದಾರೆ.

‘ಘಟನೆ ನಡೆದಾಗ ಎಟಿಎಸ್‌ ಈ ಪ್ರಕರಣದ ತನಿಖೆ ನಡೆಸಿತ್ತು. ನಂತರದ ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ಆರಂಭಿಸಿತು. ನಕಲಿ ತನಿಖೆಯನ್ನು ನಕಲಿ ಅಧಿಕಾರಿಯೊಬ್ಬರು ನಡೆಸಿದ್ದಾರೆ ಎಂಬುದನ್ನು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ’ ಎಂದು ಮುಜಾವರ್ ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

‘ನಾನೂ ಈ ಪ್ರಕರಣದ ತನಿಖಾ ತಂಡದಲ್ಲಿದ್ದೆ. ‘ಹೋಗಿ ಮೋಹನ್ ಭಾಗವತ್ ಅವರನ್ನು ಬಂಧಿಸಿ ಕರೆತನ್ನಿ’ ಎಂದು ಮೇಲಿನಿಂದ ಆದೇಶ ಬಂತು. ಎಟಿಎಸ್‌ ಯಾವ ರೀತಿಯಲ್ಲಿ ತನಿಖೆ ನಡೆಸಿತು ಮತ್ತು ಏಕೆ ಎಂಬುದನ್ನು ನಾನು ಹೇಳಲಾರೆ, ಆದರೆ ರಾಮ್‌ ಕಾಲಸಂಗ್ರ, ಸಂದೀಪ್ ದಾಂಗೆ, ದಿಲೀಪ್ ಪಾಟೀದಾರ್‌ ಮತ್ತು ಮೋಹನ ಭಾಗವತ್ ಅವರನ್ನು ಬಂಧಿಸಿ ಕರೆತರುವಂತೆ ಆದೇಶಿಸಲಾಗಿತ್ತು. ಇವು ಪಾಲಿಸಲು ಸಾಧ್ಯವಿಲ್ಲದ ಆದೇಶಗಳಾಗಿದ್ದವು’ ಎಂದಿದ್ದಾರೆ.

‘ಮೋಹನ ಬಾಗವತ್ ಅವರನ್ನು ಬಂಧಿಸಿ ಕರೆತರುವುದು ನನ್ನ ಸಾಮರ್ಥ್ಯಕ್ಕೂ ಮೀರಿದ್ದಾಗಿತ್ತು. ನಾನು ಆ ಆದೇಶವನ್ನು ಪಾಲಿಸಲಿಲ್ಲ. ಅದಕ್ಕಾಗಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಯಿತು. ನನ್ನ 40 ವರ್ಷದ ವೃತ್ತಿ ಬದುಕನ್ನೇ ನಾಶ ಮಾಡಿದರು. ಹಿಂದೂ ಭಯೋತ್ಪಾದನೆ ಎಂಬುದು ಇರಲೇ ಇಲ್ಲ. ಅವೆಲ್ಲವೂ ಸುಳ್ಳು’ ಎಂದು ಮುಜಾವರ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X