ರಾಜಸ್ಥಾನ | ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಶಂಕೆ; ಯುವಕನಿಗೆ ಥಳಿಸಿ ಹತ್ಯೆ

Date:

ವಿವಾಹಿತ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಯುವಕನೋರ್ವನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ರಾವತ್ ಮಜ್ರಾ ಗ್ರಾಮದಲ್ಲಿ ನಡೆದಿದೆ.

- Advertisement -

ಬುಧವಾರ ರಾತ್ರಿ 25 ವರ್ಷದ ಯುವಕನಿಗೆ ಥಳಿಸಿ ಹತ್ಯೆ ಮಾಡಲಾಗಿದ್ದು ಈ ಹತ್ಯೆಗೆ ಸಂಬಂಧಿಸಿದಂತೆ ಮಹಿಳೆಯ ಅತ್ತೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಗುರುವಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ನೀಮ್ ಕಾ ಥಾನಾ ಸರ್ಕಲ್) ಅನುಜ್ ದಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಕಾಂಗೋ ಜ್ವರದಿಂದ ಮಹಿಳೆ ಸಾವು; ಮಾರ್ಗಸೂಚಿ ಹೊರಡಿಸಿದ ರಾಜಸ್ಥಾನ ಸರ್ಕಾರ

ಮೃತ ಯುವಕನನ್ನು ಮುಖೇಶ್ ಕುಮಾರ್ ಮೀನಾ ಎಂದು ಗುರುತಿಸಲಾಗಿದೆ. ಮುಖೇಶ್ ಮೇಲೆ ಗುಂಪೊಂದು ಹಲ್ಲೆ ನಡೆಸುತ್ತಿದೆ ಎಂಬ ಮಾಹಿತಿ ಲಭಿಸಿದ ಕೂಡಲೆ ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿದ್ದು ಮುಖೇಶ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಮುಖೇಶ್ ಸಾವನ್ನಪ್ಪಿರುವುದಾಗಿ ಘೋಷಿಸಿಸಿದ್ದಾರೆ ಎಂದು ಹೇಳಿದರು.

ಪೊಲೀಸರ ಪ್ರಕಾರ, ಮುಖೇಶ್ ಬನ್ಸೂರ್ ನಿವಾಸಿಯಾಗಿದ್ದು, ಟೆಂಟ್ ವ್ಯಾಪಾರವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಒಂದು ವರ್ಷದ ಹಿಂದೆ ಆತನ ಉದ್ಯೋಗ ಸ್ಥಳದಿಂದ 2 ಕಿಮೀ ದೂರದಲ್ಲಿರುವ ರಾವತ್ ಮಜ್ರಾ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಭೇಟಿಯಾಗಿದ್ದನು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಬುಡಕಟ್ಟು ಬಾಲಕನ ಥಳಿಸಿ ಹತ್ಯೆ: 7 ಟಿಎಂಸಿ ನಾಯಕರ ಬಂಧನ

ಮೃತನ ಸಹೋದರಿ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಡಿಎಸ್‌ಪಿ ಅನುಜ್ ದಾಲ್ ತಿಳಿಸಿದ್ದಾರೆ.

ಪ್ರಾಥಮಿಕವಾಗಿ ಗುಂಪು ಹಲ್ಲೆ ನಡೆಸಿದ್ದರಿಂದ ಮುಖೇಶ್ ಸಾವನ್ನಪ್ಪಿರುವುದಾಗಿ ಕಂಡುಬಂದಿದೆ. ಆದರೆ ಮರಣೋತ್ತರ ಪರೀಕ್ಷೆ ವರದಿ ಬರಬೇಕಷ್ಟೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...