ವಾಮಾಚಾರ ಆರೋಪ; ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ

Date:

Advertisements

ವಾಮಾಚಾರ ಮಾಡಿದ ಆರೋಪ ಮಾಡಿ ಪಾಕಿಸ್ತಾನ ಮಹಿಳೆ ಸೀಮಾ ಹೈದರ್ ಮನೆಗೆ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿದ ಘಟನೆ ಶನಿವಾರ ನಡೆದಿದೆ. ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಆರೋಪಿಯನ್ನು ಗುಜರಾತ್‌ನ ಸುರೇಂದರ್ ನಗರದ ನಿವಾಸಿ ತೇಜಸ್ ಎಂದು ಗುರುತಿಸಿದ್ದಾರೆ. ಆತ ಮಾನಸಿಕ ಅಸ್ವಸ್ಥನಂತೆ ತೋರುತ್ತಿದೆ. ಆತ ಸಂಜೆ ಸುಮಾರು 7 ಗಂಟೆಗೆ ಸೀಮಾ ಮನೆಗೆ ನುಗ್ಗಲು ಯತ್ನಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

Advertisements

“ತೇಜಸ್ ಗುಜರಾತ್ ಮೂಲದವನಾಗಿದ್ದು, ಗುಜರಾತ್‌ನಿಂದ ನವದೆಹಲಿಗೆ ಹೋಗುವ ರೈಲಿನ ಸಾಮಾನ್ಯ ಕೋಚ್ ಮೂಲಕ ಪ್ರಯಾಣಿಸಿ ಬಂದಿದ್ದಾನೆ. ನವದೆಹಲಿ ರೈಲ್ವೆ ನಿಲ್ದಾಣದಿಂದ ಬಸ್ ಮೂಲಕ ಸೀಮಾ ನೆಲೆಸಿರುವ ಗ್ರಾಮಕ್ಕೆ ತಲುಪಿದ್ದಾನೆ. ಆತನ ಮೊಬೈಲ್ ಫೋನ್‌ನಲ್ಲಿ ಸೀಮಾ ಸ್ಕ್ರೀನ್‌ಶಾಟ್‌ಗಳಿವೆ” ಎಂದು ರಬುಪುರ ಕೊಟ್ವಾಲಿಯ ಉಸ್ತುವಾರಿ ವಹಿಸಿರುವ ಅಧಿಕಾರಿ ಸುಜೀತ್ ಉಪಧ್ಯಾಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

“ತೇಜಸ್ ಬಂಧನ ಮಾಡಲಾಗಿದೆ. ವಿಚಾರಣೆ ನಡೆಸಿದಾಗ ಸೀಮಾ ತನ್ನ ಮೇಲೆ ಮಾಟಮಂತ್ರ (ವಾಮಾಚಾರ) ಮಾಡಿದ್ದಾರೆ ಎಂದು ತೇಜಸ್ ಪೊಲೀಸರಿಗೆ ತಿಳಿಸಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ, ತನಿಖೆ ನಡೆಯುತ್ತಿದೆ” ಎಂದು ಸುಜೀತ್ ತಿಳಿಸಿದ್ದಾರೆ.

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಾಕೋಬಾಬಾದ್ ಮೂಲದ 32 ವರ್ಷದ ಸೀಮಾ ಹೈದರ್ 2023ರಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದರು. ತಾನು ಇಷ್ಟಪಟ್ಟ ಭಾರತದ 27 ವರ್ಷದ ಸಚಿನ್ ಮೀನಾ ಅವರನ್ನು ವಿವಾಹವಾಗಲು ಪಾಕಿಸ್ತಾನ ತೊರೆದು ಅಕ್ರಮವಾಗಿ ಸೀಮಾ ಭಾರತ ಪ್ರವೇಶಿಸಿದ್ದರು.

ತನ್ನ ಮಕ್ಕಳನ್ನು ಕರೆದುಕೊಂಡು 2023ರ ಮೇ ತಿಂಗಳಲ್ಲಿ ಕರಾಚಿಯಲ್ಲಿರುವ ಮನೆಯಿಂದ ನೇಪಾಳ ಮೂಲಕ ಭಾರತಕ್ಕೆ ಪ್ರಯಾಣ ಬೆಳೆಸಿದರು. ಆ ವರ್ಷದ ಜುಲೈನಲ್ಲೇ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಸಚಿನ್ ಮೀನಾ ಜೊತೆ ಸೀಮಾ ನೆಲೆಸಿರುವುದು ಭಾರತೀಯ ಅಧಿಕಾರಿಗಳ ಗಮನಕ್ಕೆ ಬಂದಾಗ ಸುದ್ದಿಯಾದರು. ಅವರಿಬ್ಬರು ಈಗ ವಿವಾಹವಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X