ದೇಹಕ್ಕೆ ದೂರು ಪತ್ರಗಳನ್ನು ಕಟ್ಟಿಕೊಂಡು ತೆವಳುತ್ತಾ ಸರ್ಕಾರಿ ಕಚೇರಿಗೆ ಬಂದ ವ್ಯಕ್ತಿ

Date:

Advertisements

ವ್ಯಕ್ತಿಯೊಬ್ಬರು ಹಲವಾರು ದೂರು ಪತ್ರಗಳನ್ನು ದಾರದೊಂದಿಗೆ ಹೆಣೆದುಕೊಂಡು, ಅದನ್ನು ತಮ್ಮ ದೇಹಕ್ಕೆ ಕಟ್ಟಿಕೊಂಡು ವಿಭಾಗೀಯ ಆಯುಕ್ತರ ಕಚೇರಿಗೆ ತೆವಳುತ್ತಾ ಬಂದು ಪ್ರತಿಭಟನೆ ನಡೆಸಿರುವ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ.

ಹೋರ್ ಜಿಲ್ಲೆಯ ಬಿಷಂಖೇಡಿ ಗ್ರಾಮದ ನಿವಾಸಿ ಬಜರಂಗಿ ಎಂಬವರು ತಮ್ಮ ಗ್ರಾಮದ ಸಮಸ್ಯೆಗಳ ಕುರಿತು ಎಷ್ಟು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ, ಅವರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ತಮ್ಮ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ತಮ್ಮ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಈ ರೀತಿ ಪ್ರತಿಭಟನೆ ನಡೆಸಿರುವುದಾಗಿ ಬಜರಂಗಿ ಹೇಳಿಕೊಂಡಿದ್ದಾರೆ.

Advertisements

“ನಾನು ನನ್ನ ಗ್ರಾಮಕ್ಕೆ ನೀರು ಪಡೆಯುವುದಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ನಾವು ಜಿಲ್ಲಾಧಿಕಾರಿ, ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪದೇ ಪದೇ ಮನವಿ ಸಲ್ಲಿಸಿದ್ದೇವೆ. ಆದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಧಿಕಾರಿಗಳ ನಿಷ್ಕ್ರಿಯತೆಯಿಂದ ಹತಾಶೆಗೊಂಡು ನಮ್ಮ ಮನವಿ ಪತ್ರಗಳು ಮತ್ತು ದೂರು ಪತ್ರಗಳನ್ನು ದಾರದಲ್ಲಿ ಹೆಣೆದು, ದೇಹಕ್ಕೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದೇನೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಅಧಿಕಾರಿಗಳು ಬಜರಂಗಿಯವರ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಗ್ರಾಮದಲ್ಲಿ ಮುದಾಯ ಕೇಂದ್ರದ ಬಳಿ ಮಾತ್ರ ನೀರಿನ ಕೊರತೆ ಕಂಡುಬಂದಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಅಧಿಕಾರಿಗಳು ಬೋರ್‌ವೆಲ್ ಕೊರೆಸಲಾಗಿದ್ದು, ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಲು ಪಂಪ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರದೀಪ್ ಸಕ್ಸೇನಾ ಹೇಳಿದ್ದಾರೆ.

2,100 ನಿವಾಸಿಗಳಿರುವ ಈ ಗ್ರಾಮದಲ್ಲಿ 20 ಕೈ ಪಂಪ್‌ಗಳಿದ್ದು, ಅವುಗಳಲ್ಲಿ 12 ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ, ಹೆಚ್ಚಿನ ಮನೆಗಳು ತಮ್ಮದೇ ಆದ ನೀರಿನ ಮೂಲಗಳನ್ನು ಹೊಂದಿದ್ದಾರೆ ಎಂದು ಸಕ್ಸೇನಾ ತಿಳಿಸಿದ್ದಾರೆ.

ಮಧ್ಯಪ್ರದೇಶವು ಈ ಹಿಂದೆಯೂ ಇದೇ ರೀತಿಯ ವಿನೂತನ ಪ್ರತಿಭಟನೆಗಳನ್ನು ಕಂಡಿದೆ. ಕಳೆದ ವರ್ಷ ಜುಲೈನಲ್ಲಿ, ಮಂಡ್ಸೌರ್‌ನಲ್ಲಿ ವೃದ್ಧ ರೈತರೊಬ್ಬರು ತಮ್ಮ ಭೂಮಿಯನ್ನು ಕೆಲವರು ಕಬಳಿಸಿಕೊಂಡಿದ್ದಾರೆಂದು ದೂರು ನೀಡಿದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲವೆಂದು ಉರುಳುಸೇವೆ ಪ್ರತಿಭಟನೆ ಮಾಡಿದ್ದರು. ಡಿಸೆಂಬರ್‌ನಲ್ಲಿ, ಮತ್ತೊಬ್ಬ ರೈತ ದೇವಾಸ್‌ನಲ್ಲಿರುವ ತನ್ನ ಭೂ ವಿವಾದವನ್ನು ಪರಿಹರಿಸುವಲ್ಲಿ ಮ್ಯಾಜಿಸ್ಟ್ರೇಟ್‌ ಕಚೇರಿಯ ವಿಳಂಬವನ್ನು ಖಂಡಿಸಿ ತನ್ನ ಕುಟುಂಬದೊಂದಿಗೆ ಮೊಣಕಾಲುಗಳ ಮೇಲೆ ನಡೆದು ಗಮನ ಸೆಳೆದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X