ಸುಡುಬಿಸಿಲಿನಲ್ಲಿ ನಾಯಿಯನ್ನು ಕಟ್ಟಿಹಾಕಿದ್ದಕ್ಕೆ ವ್ಯಕ್ತಿಗೆ 1,050 ರೂ. ದಂಡ

Date:

ಸುಡುಬಿಸಿಲಿನಲ್ಲಿ ತನ್ನ ನಾಯಿಯನ್ನು ಕಟ್ಟಿಹಾಕಿದ್ದಕ್ಕೆ ವ್ಯಕ್ತಿಯೊಬ್ಬರಿಗೆ 1,050 ರೂ. ದಂಡ ವಿಧಿಸಿರುವ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಪ್ರಕರಣವನ್ನು 15 ತಿಂಗಳುಗಳ ಕಾಲ ವಿಚಾರಣೆ ನಡೆಸಿದ ನಂತರ ಸ್ಥಳೀಯ ಕೋರ್ಟ್ ಅರೋಪಿಗೆ ದಂಡ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

2024ರ ಜೂನ್ 20ರಂದು ಫರಿದಾಬಾದ್‌ನ ಸೆಕ್ಟರ್ 82 ರಲ್ಲಿರುವ ಪುರಿ ಪ್ರಾಣಾಯಾಮ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಪೀಪಲ್ ಫಾರ್ ಅನಿಮಲ್ಸ್ ಯೂನಿಟ್‌ನ ವೃಂದಾ ಶರ್ಮಾ ಅವರ ದೂರಿನ ಆಧಾರದ ಮೇಲೆ ಬಿಪಿಟಿಪಿ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಇದನ್ನು ಓದಿದ್ದೀರಾ? ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

ದೀಪಕ್ ಶರ್ಮಾ ಎಂಬವರು ಸುಡು ಬಿಸಿಲಿನಲ್ಲಿ ತನ್ನ ನಾಯಿಯನ್ನು ಸಣ್ಣ ಬಾಲ್ಕನಿಯಲ್ಲಿ ಕಟ್ಟಿಹಾಕಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಪೀಪಲ್ ಫಾರ್ ಅನಿಮಲ್ಸ್ ಯೂನಿಟ್‌ ತಂಡವು ಪೊಲೀಸರ ಸಹಾಯದಿಂದ ನಾಯಿಯನ್ನು ರಕ್ಷಿಸಿತ್ತು. ಈ ತಂಡದೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವು ದೀಪಕ್ ಶರ್ಮಾ ಮೇಲಿದೆ.

ತನಿಖೆಯ ನಂತರ, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು. ಆರಂಭದಲ್ಲಿ, ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನಂತರ ನ್ಯಾಯಾಲಯವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ಅನ್ನೂ ಸೇರಿಸಿತು. ಈ ಸೆಕ್ಷನ್ ಪ್ರಾಣಿಗೆ ಹಾನಿ ಮಾಡಿದರೆ 1,000 ರೂ.ಗಳ ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ.

ವಿಚಾರಣೆಯ ವೇಳೆ ದೀಪಕ್ ಶರ್ಮಾ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ನ್ಯಾಯಾಲಯವು ಅವರನ್ನು ದೋಷಿ ಎಂದು ತೀರ್ಪು ನೀಡಿತು. ಇತ್ತೀಚೆಗೆ ವಾದ ವಿವಾದ ಆಲಿಸಿದ ಕೋರ್ಟ್ ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ 50 ರೂ.ಗಳ ದಂಡ ಮತ್ತು ಐಪಿಸಿಯ ಸೆಕ್ಷನ್ 429ರ ಅಡಿಯಲ್ಲಿ 1,000 ರೂ.ಗಳ ದಂಡವನ್ನು ವಿಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು ಬಲ್ಲಿರಾ?

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು,...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...