10 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜನನಾಂಗಕ್ಕೆ ರಾಡ್ ತುರುಕಿಸಿದ ವಿಕೃತ ಕಾಮಿ

Date:

Advertisements

ವಿಕೃತ ಕಾಮಿಯೋರ್ವ ಸುಮಾರು 10 ವರ್ಷದ ಬಾಲಕಿಯ ಅತ್ಯಾಚಾರ ಮಾಡಿ, ಆಕೆಯ ಜನನಾಂಗಕ್ಕೆ ರಾಡ್ ತುರುಕಿಸಿರುವ ಘಟನೆ ಗುಜರಾತ್‌ನ ಭರೂಚ್‌ನಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ 36 ವರ್ಷದ ವಿಜಯ್ ಪಾಸ್ವಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಆತ ಬಾಲಕಿಯನ್ನು ಆಕೆಯ ಮನೆಯ ಬಳಿ ಅಪಹರಿಸಿ ಬಳಿಕ ಭರೂಚ್‌ನ ಜಗಡಿಯಾ ಕೈಗಾರಿಕಾ ಪ್ರದೇಶದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

Advertisements

ಬಾಲಕಿಯ ಮನೆಯ ಪಕ್ಕದಲ್ಲೇ ಆರೋಪಿ ವಾಸಿಸುತ್ತಿದ್ದು, ಆಕೆಯ ತಂದೆಯೊಂದಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಬಾಲಕಿಯ ಗುಪ್ತಾಗದಲ್ಲಿ ಗಂಭೀರ ಗಾಯಗಳಿವೆ ಎಂದು ವರದಿಯಾಗಿದೆ.

ಆಕೆಯನ್ನು ಭರೂಚ್‌ನ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಗಿದೆ. ಆದರೆ ತೀವ್ರ ಗಾಯಗಳಿರುವುದರಿಂದಾಗಿ ಆಕೆಯ ಸ್ಥಿತಿ ಹದಗೆಟ್ಟಿದೆ. ತಕ್ಷಣ ಆಕೆಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಬಳಿಕ ಆಕೆಯನ್ನು ವಡೋದರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

ಈ ವಿಕೃತ ಕಾಮಿ ಬಾಲಕಿಯ ಜನನಾಂಗಕ್ಕೆ ಕಬ್ಬಿಣದ ರಾಡ್‌ಗಳನ್ನು ಅಳವಡಿಸಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಉಪಾಧೀಕ್ಷಕ ಕುಶಾಲ್ ಓಜಾ, “ಆರೋಪಿ ಬಾಲಕಿಯನ್ನು ಅಪಹರಿಸಿ ಪೊದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಆಕೆಗೆ ತೀವ್ರ ರಕ್ತಸ್ರಾವವಾಗಿದೆ. ಬಾಲಕಿ ತಾಯಿ ಆಕೆಯ ಕೂಗು ಕೇಳಿದಾಗ ಆಕೆ ಪೊದೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X