ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

Date:

Advertisements

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ ಬಿಂಬಿಸಿಕೊಂಡು, ಏಳು ಮಂದಿ ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಆದೇಶದಂತೆ ಒಂಬತ್ತು ಮಂದಿಯ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು,7 ದಿನಗಳ ಒಳಗಾಗಿ ವರದಿ ನೀಡುವಂತೆ ಆದೇಶಿಸಲಾಗಿದೆ.

ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ತಾನು ಶಿಕ್ಷಕಿ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್ ಶಿಪ್ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿ ಮಾಡುವಂತೆ ಹೇಳುತ್ತಿದ್ದ. ಈ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಅವರ ಮೊಬೈಲ್ ಮೊಬೈಲ್ ಗಳನ್ನು ಕಸಿದುಕೊಂಡು ಅವರು ನೆರವಿಗಾಗಿ ಕರೆ ಮಾಡದಂತೆ ತಡೆಯುತ್ತಿದ್ದ ಎಂದು ತಿಳಿದು ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಆರೋಪಿಯಿಂದ ಇದುವರೆಗೆ 16 ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ಒಬ್ಬಾಕೆ ಯುವತಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಈತನನ್ನು ಭೇಟಿ ಮಾಡಿದ್ದು, ಇಬ್ಬರ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂದು ಸಿಂಧಿ ಎಸ್ಪಿ ರವೀಂದ್ರ ವರ್ಮಾ ತಿಳಿಸಿದ್ದಾರೆ. ಇತರ ಆರು ಮಂದಿ ಕಾಲೇಜು ವಿದ್ಯಾರ್ಥಿನಿಯರಾಗಿದ್ದು, 19 ರಿಂದ 20 ವರ್ಷದವರು.

ನಿರುದ್ಯೋಗಿಯಾಗಿರುವ ಪ್ರಜಾಪತಿಯ ಈ ದಂಧೆ ಈ ವರ್ಷದ ಏಪ್ರಿಲ್ ನಿಂದ ಆರಂಭವಾಗಿದ್ದರೂ, ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ನೀಡಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X