ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

Date:

Advertisements

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಕಳುಹಿಸಿದ ಆರೋಪದ ಮೇಲೆ ಗಾಜಿಯಾಬಾದ್ ನಿವಾಸಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ರೋಹಿತ್ ತ್ಯಾಗಿಯನ್ನು ಆತನ ಊರಿನಿಂದ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇದು ತಮಾಷೆ ಮಾಡುವ ಉದ್ದೇಶದಿಂದ ಮಾಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುಧವಾರ, ಖಾನ್ ಅವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಪ್ರಯಾಣಿಸಲು ರೋಹಿತ್ ತ್ಯಾಗಿ ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ. ಕ್ಯಾಬ್ ಡ್ರೈವರ್ ವಿಳಾಸವನ್ನು ತಲುಪಿದಾಗ, ಇದು ತಮಾಷೆ ಎಂದು ಅರಿತು ದೂರು ದಾಖಲಿಸಿದ್ದಾರೆ.

Advertisements

ಇದನ್ನು ಓದಿದ್ದಿರಾ?  ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಾಂದ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತ್ಯಾಗಿಯನ್ನು ಪತ್ತೆ ಹಚ್ಚಿದ್ದಾರೆ.

ಕಳೆದ ಭಾನುವಾರ ಖಾನ್ ಅವರ ನಿವಾಸದ ಮೇಲೆ ಮೋಟಾರ್‌ಬೈಕ್‌ನಲ್ಲಿ ಬಂದು ಗುಂಡು ಹಾರಿಸಲಾಗಿದೆ. ಈ ಘಟನೆಯ ಬಳಿಕ ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್ ಆನ್‌ಲೈನ್ ಪೋಸ್ಟ್‌ನಲ್ಲಿ ಈ ದಾಳಿಯ ಹೊಣೆ ಹೊತ್ತಿದ್ದಾರೆ. ಹಾಗೆಯೇ ಬಾಲಿವುಡ್ ನಟನಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ?ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಇನ್ನು ಪೊಲೀಸ್ ಮೂಲಗಳ ಪ್ರಕಾರ ಸಲ್ಮಾನ್ ಖಾನ್‌ ನಿವಾಸಕ್ಕೆ ಗುಂಡು ಹಾರಿಸಿದ ಇಬ್ಬರೂ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಭಾಗವಾಗಿದ್ದಾರೆ. ಗಾಯಕ ಸಿಧು ಮೂಸ್ ವಾಲಾ ಮತ್ತು ರಜಪೂತ ನಾಯಕ ಮತ್ತು ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಸೇರಿದಂತೆ ಹಲವಾರು ಪ್ರಮುಖ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಿಷ್ಣೋಯ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X