ಮಣಿಪುರ: ಗಲಭೆ ನಂತರ ಮ್ಯಾನ್ಮಾರ್ ಗಡಿ ಸಮೀಪದ ಖಾಲಿ ಮನೆಗಳಿಗೆ ಬೆಂಕಿ

Date:

Advertisements

ಮೇ 3 ರಂದು ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಖಾಲಿ ಮಾಡಲಾಗಿದ್ದ ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಮಣಿಪುರದ ಮೊರೆಹ್ ಬಜಾರ್‌ನಲ್ಲಿರುವ ಹಲವಾರು ಮನೆಗಳಿಗೆ ಬುಧವಾರ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ.

ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕೇಂದ್ರ ಭದ್ರತಾ ಪಡೆಗಳು ಬಳಸುತ್ತಿದ್ದ ಎರಡು ವಾಹನಗಳನ್ನು ಸುಟ್ಟು ಹಾಕಿದ ಕೆಲವು ಗಂಟೆಗಳ ನಂತರ ಈ ಘಟನೆ ನಡೆದಿದೆ.

ನಾಗಾಲ್ಯಾಂಡ್‌ನ ಡಿಂಪೌರ್‌ನಿಂದ ವಾಹನಗಳು ಬರುತ್ತಿದ್ದಾಗ ಎನ್‌ಎಚ್ 2 ರ ಸಪೋರ್ಮಿನಾ ಪ್ರದೇಶದಲ್ಲಿ ವಾಹನಗಳನ್ನು ತಡೆದು ಬೆಂಕಿ ಹಚ್ಚಲಾಗಿದೆ. ಕುಕಿ ನಿವಾಸಿಗಳು ವಾಹನಗಳನ್ನು ಪರಿಶೀಲಿಸಲು ಬಯಸಿದ್ದರು ಮತ್ತು ಭದ್ರತಾ ಪಡೆಗಳು ತಮ್ಮ ವಾಹನಗಳ ಒಳಗೆ ಪ್ರವೇಶಿಸಲು ನಿರಾಕರಿಸಿದಾಗ ಕೆಲವರು ಬೆಂಕಿ ಹಚ್ಚಿದರು.ಆದಾಗ್ಯೂ, ಎರಡೂ ಘಟನೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಭದ್ರತಾ ಮೂಲಗಳು ತಿಳಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ ಲೋಕಸಭೆ ಸ್ಪೀಕರ್

ಮೇ 3 ರಂದು ಹಿಂಸಾಚಾರ ಪ್ರಾರಂಭವಾದಾಗ ಕುಕಿ ಮತ್ತು ಮೀಟೀ ಸಮುದಾಯಗಳಿಗೆ ಸೇರಿದ ಸಾವಿರಾರು ಜನರು ಮೊರೆಹ್‌ನಿಂದ ಓಡಿಹೋದರು. ಅನೇಕ ಮನೆಗಳಿಗೆ ಆಗಲೇ ಬೆಂಕಿ ಹಚ್ಚಲಾಗಿತ್ತು. ಇದೀಗ ಉಳಿದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮೋರಹ್, ವಿವಿಧ ಜನ ಸಮುದಾಯವನ್ನು ಹೊಂದಿರುವ ಪ್ರಮುಖ ವ್ಯಾಪಾರ ಕೇಂದ್ರ. ಅಲ್ಲಿ ಕುಕಿಗಳು ಬಹುಸಂಖ್ಯಾತರು.

ಮೇ 3 ರಿಂದ ಶುರುವಾದ ಹಿಂಸಾಚಾರದಿಂದ 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X