ಮಣಿಪುರ ಹಿಂಸಾಚಾರ| ಪೊಲೀಸ್ ಠಾಣೆ, ಅರಣ್ಯ ಕಚೇರಿಗೆ ಬೆಂಕಿ; ಸುಟ್ಟು ಕರಕಲು

Date:

Advertisements

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ಶನಿವಾರ ನಸುಕಿನಲ್ಲಿ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೊಲೀಸ್ ಔಟ್‌ಪೋಸ್ಟ್, ಅರಣ್ಯ ಬೀಟ್ ಕಚೇರಿ ಮತ್ತು ಅರಣ್ಯ ವ್ಯಾಪ್ತಿಯ ಕಚೇರಿಯನ್ನು ಸುಟ್ಟು ಹಾಕಿದ್ದಾರೆ.

ನಾಲ್ಕೈದು ಗ್ರಾಮಗಳಲ್ಲಿ ಸುಮಾರು ಹನ್ನೆರಡು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ. ಈ ಮನೆಗಳು ಮೈತಿ ಸಮುದಾಯದವರಿಗೆ ಸೇರಿದ್ದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಸಂಜೆ ಸೋಬಮ್ ಶರತ್‌ಕುಮಾರ್ ಸಿಂಗ್ (59) ಎಂಬ ಮೈತಿ ಸಮುದಾಯದ ವ್ಯಕ್ತಿಯ ಕೊಲೆಯಾದ ಬಳಿಕ ಹಿಂಸಾಚಾರ ಮತ್ತೆ ಆರಂಭವಾಗಿದೆ. ಹತ್ಯೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಅಲ್ಲಲ್ಲಿ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗೆಯೇ ಜಿರಿಬಾಮ್ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಮಣಿಪುರದಲ್ಲಿ ಮಕಾಡೆ ಮಲಗಿದ ಬಿಜೆಪಿ

ಮತ್ತೆ ಹಿಂಸಾಚಾರ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಅನಿರ್ದಿಷ್ಟ ಅವಧಿಗೆ ಕರ್ಫ್ಯೂ ವಿಧಿಸಲಾಗಿದೆ. ಇನ್ನು ಮನೆಗೆ ಬೆಂಕಿ ಬೀಳುತ್ತಿದ್ದಂತೆ ಮನೆ ಕಳೆದುಕೊಂಡ, ಹಿಂಸಾಚಾರದಿಂದಾಗಿ ಅಪಾಯದಲ್ಲಿದ್ದ, ಹತ್ತಿರದ ಹಳ್ಳಿಯ 200ಕ್ಕೂ ಹೆಚ್ಚು ಜನರನ್ನು ಜಿರಿಬಾಮ್ ಪಟ್ಟಣದ ತಾತ್ಕಾಲಿಕ ಆಶ್ರಯದಲ್ಲಿ ನೆಲೆಸಿದ್ದಾರೆ.

“ಸರ್ಕಾರದಿಂದ ಆಹಾರ, ಹಾಸಿಗೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಪರಿಸ್ಥಿತಿ ಸಹಜವಾದ ನಂತರ ಅವರು ತಮ್ಮ ಗ್ರಾಮಗಳಿಗೆ ಮರಳುತ್ತಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಆದರೆ ಅನಿರೀಕ್ಷಿತವಾಗಿದೆ. ಪೀಡಿತ ಪ್ರದೇಶಗಳಿಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ” ಎಂದು ಜಿಲ್ಲಾಧಿಕಾರಿ ಕೃಷ್ಣ ಕುಮಾರ್ ಮಾಹಿತಿ ನಿಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X