ಮಣಿಪುರ ಹಿಂಸಾಚಾರ | ದಾಳಿಕೋರರಿಂದ ಸ್ವಯಂಸೇವಕನ ಹತ್ಯೆ; ಶಸ್ತ್ರಾಸ್ತ್ರಗಳ ಲೂಟಿ

Date:

Advertisements

ಮಣಿಪುರದ ಇಂಫಾಲ್ ಜಿಲ್ಲೆಯ ಚಿಂಗಾರೆಲ್ ತೇಜ್‌ಪುರದಲ್ಲಿರುವ 5ನೇ ಭಾರತೀಯ ರಿಸರ್ವ್ ಬೆಟಾಲಿಯನ್ ಸ್ಟೇಷನ್‌ ಮೇಲೆ ಗಲಭೆಕೋರ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿದೆ. ದಾಳಿಯಲ್ಲಿ ಸ್ವಯಂಸೇವಕನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಬೆಟಾಲಿಯನ್‌ ಟ್ರೂಫ್‌ ಮೇಲೆ ದಾಳಿ ನಡೆಸಿರುವ ದಾಳಿಕೋರರು ಅಲ್ಲಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದೆ ಎಂದು ಹೇಳಲಾಗಿದೆ.

ಮೃತನನ್ನು 24 ವರ್ಷ ವಯಸ್ಸಿನ ಓಕ್ರಮ್ ಸನಾಟನ್ ಎಂದು ಗುರುತಿಸಲಾಗಿದೆ. ಓಕ್ರಮ್ ಅವರು ಇಂಫಾಲ್ ಜಿಲ್ಲೆಯ ಪಂಗೇ ಒಕ್ರಾಮ್ ಲೈಕೇಯ್‌ ಪ್ರದೇಶದವರು. ದಾಳಿಯ ವೇಳೆ ಗಾಯಗೊಂಡು ಅವರು ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

Advertisements

ದಾಳಿಕೋರರು ಲೂಟಿ ಮಾಡಿದ ಶಸ್ತ್ರಾಸ್ತ್ರಗಳಲ್ಲಿ ಆರು AK-47 ಗನ್‌ಗಳು, ನಾಲ್ಕು ಕಾರ್ಬೈನ್‌ಗಳು, ಮೂರು ರೈಫಲ್‌ಗಳು ಮತ್ತು ಎರಡು ಲಘು ಮೆಷಿನ್ ಗನ್‌ಗಳು ಮತ್ತು ಮದ್ದುಗುಂಡುಗಳಿದ್ದವು ಎಂದು ಸ್ಥಳೀಯ ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ವರ್ಷ ಮೇ ತಿಂಗಳಲ್ಲಿ ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಸಂಘರ್ಷ ಆರಂಭವಾದಾಗಿನಿಂದ ಚಿಂಗಾರೆಲ್ ತೇಜ್‌ಪುರ ಪ್ರದೇಶವು ಗುಂಪು ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ.

ಇದುವರೆಗೆ, ಮಣಿಪುರದ ಕುಕಿ ಮತ್ತು ಮೈಥೇಯಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಯಲ್ಲಿ ಕನಿಷ್ಠ 180 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೈಥೇಯಿಗಳು ರಾಜ್ಯದ ಜನಸಂಖ್ಯೆಯ 50%ಕ್ಕಿಂತ ಹೆಚ್ಚು ಜನರನ್ನು ಹೊಂದಿದ್ದಾರೆ. ಮಂಗಳವಾರ ರಾತ್ರಿ ಗುಂಪು ದಾಳಿ ನಡೆದ ಇಂಫಾಲ್ ಜಿಲ್ಲೆ ಸೇರಿದಂತೆ ಕಣಿವೆ ಜಿಲ್ಲೆಗಳಲ್ಲಿ ಅವರೇ ಬಹುಸಂಖ್ಯಾತರಾಗಿದ್ದಾರೆ.

ಗುಂಪು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸುವಂತೆ ಬಿರೇನ್ ಸಿಂಗ್ ಅವರ ಸರ್ಕಾರವು ಜನರನ್ನು ಒತ್ತಾಯಿಸಿದೆ. ಆದರೆ, ಇದುವರೆಗೆ ರಾಜ್ಯ ಪೊಲೀಸರು ವಶಪಡಿಸಿಕೊಂಡಿರುವುದು ಲೂಟಿಯಾದ ಶಸ್ತ್ರಾಸ್ತ್ರಗಳ ಪೈಕಿ ಕೇವಲ 1% ಶಸ್ತ್ರಾಸ್ತ್ರಗಳು ಮಾತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X