ಒಡಿಶಾ: ಬೆಂಗಳೂರಿನಿಂದ ತೆರಳುತ್ತಿದ್ದ ಹೌರಾ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಢಿಕ್ಕಿ; 233 ಕ್ಕೂ ಹೆಚ್ಚು ಸಾವು, 900ಕ್ಕೂ ಹೆಚ್ಚು ಮಂದಿಗೆ ಗಾಯ

Date:

Advertisements

ಇಂದು(ಜೂ 2) ಸಂಜೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ 233ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಸಮೀಪ ಕೋಲ್ಕತಾದಿಂದ ಬರುತ್ತಿದ್ದ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿ ತಪ್ಪುತ್ತದೆ. ಹಳಿ ತಪ್ಪಿದ ನಂತರ ಒಂದೇ ಹಳಿಯ ಮೇಲೆ ಬರುತ್ತಿದ್ದ ಗೂಡ್ಸ್ ರೈಲಿಗೆ ಕೋರಮಂಡಲ್ ರೈಲು ಢಿಕ್ಕಿ ಹೊಡೆಯುತ್ತದೆ. ಢಿಕ್ಕಿ ಹೊಡೆದ ನಂತರ ಪಕ್ಕದ ಹಳಿ ಮೇಲೆ ಕೋರಮಂಡಲ್ ರೈಲಿನ ಬೋಗಿಗಳು ಬೀಳುತ್ತವೆ. ಆಗ ಇದೇ ಸಂದರ್ಭದಲ್ಲಿ ಬೋಗಿಗಳು ಬಿದ್ದ ಹಳಿಯ ಮೇಲೆ ಬರುತ್ತಿದ್ದ ಯಶವಂತಪುರ – ಹೌರಾ ಎಕ್ಸ್ಪ್ರೆಸ್ ರೈಲು ಢಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ.

ಹಲವರು ರೈಲಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್) ರೈಲಿನೊಳಗೆ ಸಿಕ್ಕಿ ಬಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆ ಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ.

Advertisements

ಮಾಧ್ಯಮಗಳ ಮಾಹಿತಿಯ ಪ್ರಕಾರ, ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಬೋಗಿಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದವು. ಸ್ಥಳೀಯರ ಮಾಹಿತಿ ಅನ್ವಯ ಈ ಬೋಗಿಗಳ ಸಂಖ್ಯೆಯನ್ನು 18 ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಪರೀಕ್ಷೆ ನಡೆಸದೆ ಫಲಿತಾಂಶ; ಕುವೆಂಪು ವಿವಿ ಕುಲಪತಿ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಈ ಬೋಗಿಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಸಿಕ್ಕಿಹಾಕಿಕೊಂಡಿದ್ದು, ಅವರನ್ನು ರಕ್ಷಿಸಲು ಸ್ಥಳೀಯ ಜನರು ಜಮಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಕೋಲ್ಕತ್ತಾದಿಂದ ಚೆನ್ನೈಗೆ ತೆರಳುತ್ತಿತ್ತು.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ. ಪ್ರಸ್ತುತ ಸ್ಥಳಗದಲ್ಲಿಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ಎಸ್‌ಆರ್‌ಸಿಗೆ ರಾಜ್ಯ ಮಟ್ಟದಿಂದ ಯಾವುದೇ ಹೆಚ್ಚುವರಿ ಸಹಾಯದ ಅಗತ್ಯವಿದ್ದರೆ ಸ್ಥಳಕ್ಕೆ ತಲುಪಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಯ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದು, “ನಮ್ಮ ಸರ್ಕಾರವು ಒಡಿಶಾ ಸರ್ಕಾರ ಮತ್ತು ಆಗ್ನೇಯ ರೈಲ್ವೆಯೊಂದಿಗೆ ಸಮನ್ವಯ ಸಾಧಿಸುತ್ತಿದೆ. ಒಡಿಶಾ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಹಕರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ನಾವು 5- 6 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸುತ್ತಿದ್ದೇವೆ. ರಕ್ಷಣೆ, ಮರುಪಡೆಯುವಿಕೆ, ನೆರವು ಮತ್ತು ಸಹಾಯಕ್ಕಾಗಿ ತುರ್ತು ನಿಯಂತ್ರಣ ಕೊಠಡಿಗಳ ಜೊತೆ ಎಲ್ಲಾ ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ದುರಂತದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವಾರು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X