ಮರಾಠರಿಗೆ ಒಬಿಸಿ ಮೀಸಲಾತಿ ನೀಡಬಾರದು: ಬಿಜೆಪಿ ರಾಜ್ಯಸಭಾ ಸದಸ್ಯ ಭಾಗವತ್ ಕರಾಡ್

Date:

Advertisements

“ಮರಾಠರಿಗೆ ಹಿಂದುಳಿದ ವರ್ಗ (ಒಬಿಸಿ)‌ ಮೀಸಲಾತಿಯನ್ನು ನೀಡಬಾರದು” ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ರಾಜ್ಯಸಭಾ ಸಂಸದ ಭಾಗವತ್ ಕರಾಡ್ ಸೋಮವಾರ ಹೇಳಿದ್ದಾರೆ.

ಒಬಿಸಿ ಮೀಸಲಾತಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ ಭಾಗವತ್ ಕರಾಡ್, “ಒಬಿಸಿ ಮೀಸಲಾತಿಯನ್ನು ದುರ್ಬಲಗೊಳಿಸದಿರುವ ಬಿಜೆಪಿ ನಿಲುವು ಸ್ಪಷ್ಟವಾಗಿದೆ” ಎಂದು ಸಮರ್ಥಿಸಿಕೊಂಡರು.

ಇದನ್ನು ಓದಿದ್ದೀರಾ? ಬೀದರ್‌ | ಮರಾಠಿ ಮಾಧ್ಯಮ ಶಾಲೆಗಳಲ್ಲಿ ಕನ್ನಡ ವಿಭಾಗ ತೆರೆಯಲು ಕರವೇ ಆಗ್ರಹ

Advertisements

“ಮಹಾರಾಷ್ಟ್ರ ಸರ್ಕಾರವು ಮರಾಠರಿಗೆ ನೀಡಿರುವ ಶೇಕಡ 10ರಷ್ಟು ಮೀಸಲಾತಿಯು ಕಾನೂನು ಅಡೆತಡೆಗೆ ಒಳಗಾಗುತ್ತದೆ. ನಾನು ಓರ್ವ ಒಬಿಸಿಯಾಗಿ, ಒಬಿಸಿ ಮೀಸಲಾತಿಯ ಪ್ರಯೋಜನಗಳನ್ನು ಮರಾಠ ಸಮುದಾಯಕ್ಕೆ ವಿಸ್ತರಿಸುವುದನ್ನು ವಿರೋಧಿಸುತ್ತೇನೆ” ಎಂದು ಹೇಳಿದರು.

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಒಬಿಸಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದು, ಇದನ್ನು ಒಬಿಸಿ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X