ಹಿಂದೂಗಳ ವಿವಾಹ ‘ಪವಿತ್ರವಾದುದ್ದು’ ವರ್ಷದಲ್ಲೇ ರದ್ದುಗೊಳಿಸಲಾಗದು: ಅಲಹಾಬಾದ್ ಹೈಕೋರ್ಟ್

Date:

Advertisements

“ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು, ಹಿಂದೂ ವಿವಾಹ ಕಾಯ್ದೆಯ ಪ್ರಕಾರವಾಗಿ ವಿವಾಹ ಸಂಬಂಧದಲ್ಲಿ ತೀವ್ರ ತೊಂದರೆ ಇಲ್ಲದ ಹೊರಗಾಗಿ ಒಂದು ವರ್ಷದಲ್ಲೇ ವಿವಾಹ ಸಂಬಂಧವನ್ನು ಮುರಿಯಲಾಗದು” ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಅಶ್ವನಿ ಕುಮಾರ್ ಮಿಶ್ರಾ ಮತ್ತು ದೊನಾಡಿ ರಮೇಶ್ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆಯೊಂದರ ವೇಳೆ ಈ ಹೇಳಿಕೆ ನೀಡಿದೆ. ಸೆಕ್ಷನ್ 14ರ ಅಡಿಯಲ್ಲಿ ವಿಚ್ಛೇದನೆಗೆ ಒಂದು ವರ್ಷ ಅವಧಿ ಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಇದನ್ನು ಓದಿದ್ದೀರಾ? ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

Advertisements

ನಿಶಾಂತ್ ಭಾರದ್ವಾಜ್ ಮತ್ತು ರಿಷಿಕಾ ಗೌತಮ್ ಎಂಬ ದಂಪತಿಯು ಪರಸ್ಪರ ಒಪ್ಪಂದದ ಮೇರೆಗೆ ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13-ಬಿ ಅಡಿಯಲ್ಲಿ ವಿಚ್ಛೇದನೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸಹಾರನ್‌ಪುರದ ಕೌಟುಂಬಿಕ ನ್ಯಾಯಾಲಯವು ಸೆಕ್ಷನ್ 14ರ ಅಡಿಯಲ್ಲಿ ವಿಚ್ಛೇದನೆ ಪಡೆಯಲು ಅರ್ಹತೆಯಿಲ್ಲ. ವಿವಾಹವಾಗಿ ಒಂದು ವರ್ಷವಾದರೂ ಆಗಬೇಕು ಎಂದು ಹೇಳಿ ಅರ್ಜಿ ತಿರಸ್ಕರಿಸಿತ್ತು.

ಅದಾದ ಬಳಿಕ ನಿಶಾಂತ್ ಭಾರದ್ವಾಜ್ ಕೌಟುಂಬಿಕ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಕೂಡಾ ಅರ್ಜಿಯನ್ನು ತಿರಸ್ಕರಿಸಿದೆ. ಒಂದು ವರ್ಷವಾದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.

ಅರ್ಜಿಯು ಇಬ್ಬರು ಜೊತೆಯಾಗಿ ಜೀವಿಸಲು ಯಾವುದೇ ಕಷ್ಟವಿದೆ ಎಂಬುದನ್ನು ಉಲ್ಲೇಖಿಸಿಲ್ಲ. ಹಾಗಿರುವಾಗ ಒಂದು ವರ್ಷ ಸಮಯ ತೆಗೆದುಕೊಳ್ಳಿ. ಇಬ್ಬರು ಹಿಂದೂಗಳ ನಡುವೆ ನಡೆಯುವ ವಿವಾಹವು ಪವಿತ್ರವಾದುದ್ದು ಎಂದು ಹೈಕೋರ್ಟ್ ಹೇಳಿಕೊಂಡಿದೆ.

ಕಾನೂನು ಅಡಿಯಲ್ಲಿ ವಿಚ್ಛೇದನಕ್ಕೆ ಒಂದು ವರ್ಷ ಅವಧಿ ಬೇಕಾಗುತ್ತದೆ ಎಂಬುದು ಒಪ್ಪಬಹುದಾದರೂ ‘ಇಬ್ಬರು ಹಿಂದೂಗಳ ನಡುವಿನ ವಿವಾಹ ಪವಿತ್ರವಾದುದ್ದು’ ಎಂಬ ಹೈಕೋರ್ಟ್ ಹೇಳಿಕೆಯು ಚರ್ಚೆಗೆ ಗ್ರಾಸವಾಗಬೇಕಾಗಿರುವುದು. ಅಂತರ್‌ಧರ್ಮೀಯ ವಿವಾಹವನ್ನು ಕೀಳಾಗಿ ನ್ಯಾಯಮೂರ್ತಿಗಳು ಕಾಣುವುದೇ?

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X