ಮರ್ಯಾದೆಗೇಡು ಹತ್ಯೆ | ಸ್ನೇಹಿತನೊಂದಿಗೆ ದೆಹಲಿಗೆ ತೆರಳಿದ್ದ ಮಗಳನ್ನ ಕೊಂದ ದುರುಳ ತಂದೆ

Date:

Advertisements

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಸಮಷ್ಟಿಪುರ ಪ್ರದೇಶದ ನಿವಾಸಿ ಸಾಕ್ಷಿ ಅವರನ್ನು ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಏಪ್ರಿಲ್ 7ರಂದು ಕೃತ್ಯ ಎಸಗಲಾಗಿದ್ದು, ಆಕೆಯ ಮೃತದೇಹವು ಮನೆಯ ಶೌಚಾಲಯದಲ್ಲಿ ಗುರುವಾರ ಪತ್ತೆಯಾಗಿದೆ.

ಯುವತಿಯ ತಂದೆ, ಆರೋಪಿ ಮುಖೇಶ್‌ ಸಿಂಗ್ಅನ್ನು ಬಂಧಿಸಲಾಗಿದೆ. ಆತ ಯುವತಿಯ ಸ್ನೇಹಿತನನ್ನೂ ಕೊಲ್ಲಲು ಯತ್ನಿಸಿದ್ದಾನೆ. ಆದರೆ, ಯುವಕ ಆರೋಪಿಯ ಕೈಗೆ ಸಿಕ್ಕಿಲ್ಲವೆಂದು ಪೊಲೀಸರು ಹೇಳಿದ್ದಾರೆ.

Advertisements

ಸಾಕ್ಷಿ ಅವರು ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಾಕ್ಷಿ ತನ್ನ ಸ್ನೇಹಿತನೊಂದಿಗೆ ಮಾರ್ಚ್‌ 4ರಂದು ದೆಹಲಿ ತೆರಳಿದ್ದರು ಎಂದು ಸಾಕ್ಷಿ ಅವರ ಸೋದರ ಮಾವ ವಿಪಿನ್ ಕುಮಾರ್‌ ಹೇಳಿದ್ದಾರೆ.

ಒಂದು ವಾರದ ಹಿಂದೆ ದೆಹಲಿಗೆ ಹೋಗಿದ್ದ ಮುಖೇಶ್‌ ಸಿಂಗ್‌ ತನ್ನ ಮಗಳ ಮನವೊಲಿಸಿ ತಮ್ಮೂರಿಗೆ (ಸಮಷ್ಟಿಪುರ) ಮರಳಿ ಕರೆತಂದಿದ್ದರು. ಆದರೆ, ಕಲ ದಿನಗಳ ಬಳಿಕ, ಆಕೆ ನಾಪತ್ತೆಯಾಗಿದ್ದರು. ಸಾಕ್ಷಿ ಬಗ್ಗೆ ಆಕೆಯ ತಾಯಿ ಪ್ರಶ್ನಿಸಿದಾಗ, ಮತ್ತೆ ಮನೆ ತೊರೆದು ಹೋಗಿದ್ದಾಳೆ ಎಂದು ಆರೋಪಿ ಸಿಂಗ್ ಹೇಳಿದ್ದರು. ಆದರೆ, ಅನುಮಾನಗೊಂಡ ತಾಯಿ ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಗ್‌ ಅವರ ನಿವಾಸದಲ್ಲಿ ಬೀಗ ಹಾಕಿದ್ದ ಶೌಚಾಲಯದಲ್ಲಿ ಕೆಟ್ಟ ವಾಸನ ಬರುತ್ತಿರುವುದನ್ನು ಗಮನಿಸಿದ ಪೊಲೀಸರು, ಶೌಚಾಲಯವನ್ನು ಪರಿಶೀಲಿಸಿದ್ದಾರೆ. ಆಗ, ಆಕೆಯ ಮೃತದೇಹ ದೊರೆತಿದೆ. ಸಿಂಗ್‌ ಅವರನ್ನು ವಿಚಾರಣೆ ಒಳಪಡಿಸಿದಾಗ ತಾನೇ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X