ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

Date:

Advertisements

ಚುನಾವಣಾ ಬಾಂಡ್‌ ರೂಪದಲ್ಲಿ 100 ಕೋಟಿ ರೂ. ದೇಣಿಗೆ ಕೊಟ್ಟ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) 14,400 ಕೋಟಿ ರೂ.ಗಳ ಗುತ್ತಿಗೆ ಪಡೆದಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಶಾಂತ್ ಭೂಷಣ್, ಏಪ್ರಿಲ್‌ 11, 2023ರಲ್ಲಿ ಚುನಾವಣಾ ಬಾಂಡ್‌ ರೂಪದಲ್ಲಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡಿತ್ತು. ದೇಣಿಗೆ ನೀಡಿ ಒಂದು ತಿಂಗಳ ನಂತರ ಮಹಾರಾಷ್ಟ್ರ ಸರ್ಕಾರದಿಂದ ಥಾಣೆ-ಬೊರಿವಲಿಯಲ್ಲಿ 14,400 ಕೋಟಿ ರೂ. ವೆಚ್ಚದ ಅವಳಿ ಸುರಂಗ ಯೋಜನೆಯನ್ನು ಗುತ್ತಿಗೆ ಪಡೆದಿತ್ತು ಎಂದಿದ್ದಾರೆ.

ಎಸ್‌ಬಿಐ ಅಂಕಿಅಂಶಗಳಲ್ಲಿ ಬಾಂಡ್‌ಗಳ ಸಂಖ್ಯೆಗಳನ್ನು ಮುಚ್ಚಿಟ್ಟಿದೆ. ಕೆಲವು ದಾನಿಗಳು ಮತ್ತು ಪಕ್ಷಗಳ ಹೊಂದಾಣಿಕೆಯನ್ನು ಇಲ್ಲಿ ಊಹಿಸಬಹುದು. ಹಲವು ದೇಣಿಗೆದಾರರು ದೇಣಿಗೆ ಕೊಟ್ಟು ಲಾಭ ಪಡೆದುಕೊಂಡಿದ್ದಾರೆ ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಎಸ್‌ಬಿಐ ಬಿಡುಗಡೆ ಮಾಡಿರುವ ಅಂಕಿಅಂಶಗಳಲ್ಲಿ ಅತಿ ಹೆಚ್ಚು ದೇಣಿಗೆ ನೀಡಿದ ಪಕ್ಷಗಳಲ್ಲಿ ಮೇಘಾ ಇಂಜಿನಿಯರಿಂಗ್ ಕಂಪನಿ 966 ಕೋಟಿ ರೂ. ದೇಣಿಗೆ ನೀಡುವುದರೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮೇ 11, 2023 ರಂದು ಮೇಘಾ ಇಂಜಿನಿಯರಿಂಗ್ ಕಂಪನಿ 7,464 ಕೋಟಿ ರೂ. ಬಿಡ್‌ ಮಾಡಿ ಥಾಣೆ-ಬೊರಿವಲಿಯಲ್ಲಿ 5.57 ಕಿ.ಮೀ ದೂರದ ಅವಳಿ ಸುರಂಗ ಯೋಜನೆಯನ್ನು ಗುತ್ತಿಗೆ ಪಡೆದಿತ್ತು.

ಸುರಂಗ ನಿರ್ಮಿಸಿದ ಎಂಇಐಎಲ್ ಕಂಪನಿ ಕಾರ್ಯವೈಖರಿ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಹೊಗಳಿದ್ದರು.

ಹೈದರಾಬಾದ್‌ ಮೂಲದ ಎಂಇಐಎಲ್ ಕಂಪನಿ ಎಲ್‌ ಅಂಡ್‌ ಟಿ ಬಿಡ್‌ ಮಾಡಿದ 6,625 ಕೋಟಿ ರೂ. ಹೆಚ್ಚು ಬಿಡ್‌ ಮಾಡಿ 14,400 ಕೋಟಿ ರೂ. ಗುತ್ತಿಗೆಯನ್ನು ತನ್ನದಾಗಿಸಿಕೊಂಡಿತ್ತು. ಪಿ ಪಿ ರೆಡ್ಡಿ ಎಂಇಐಎಲ್‌ ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದು, ಭಾರತದ ಶ್ರೀಮಂತರ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X