#MentalHealthMatter | ‘ಪತ್ನಿಯನ್ನು ಎಷ್ಟೊತ್ತು ನೋಡ್ತೀರಿ, 90 ಗಂಟೆ ಕೆಲಸ ಮಾಡಿ’ ಎಂದ ಉದ್ಯಮಿಗೆ ನಟಿ ದೀಪಿಕಾ ಪಡುಕೋಣೆ ತಿರುಗೇಟು

Date:

Advertisements

ಪತ್ನಿಯನ್ನು ಎಷ್ಟು ಸಮಯ ನೋಡುತ್ತೀರಿ. ಭಾನುವಾರವೂ ಸೇರಿದಂತೆ 90 ಗಂಟೆ ಕೆಲಸ ಮಾಡಿ ಎಂದಿದ್ದ ಉದ್ಯಮಿ, ಲಾರ್ಸೆನ್ & ಟೂಬ್ರೊ(ಎಲ್ & ಟಿ) ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ವಿರುದ್ಧ ನಟಿ ದೀಪಿಕಾ ಪಡುಕೋಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಆಘಾತಕಾರಿ ಮತ್ತು ಮಾನಸಿಕ ಆರೋಗ್ಯದ ವಿಷಯ ಎಂದಿದ್ದಾರೆ.

ಸುಬ್ರಹ್ಮಣ್ಯನ್ ಅವರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, “ಎಷ್ಟು ಕಾಲ ನೀವು ನಿಮ್ಮ ಪತ್ನಿಯ ಮುಖವನ್ನೇ ದಿಟ್ಟಿಸುತ್ತಾ ಕೂರುತ್ತೀರಿ? ಭಾನುವಾರಗಳಲ್ಲೂ ನಾನು ನಿಮ್ಮನ್ನು ಕೆಲಸ ಮಾಡುವಂತೆ ಮಾಡಲು ಸಾಧ್ಯವಾದರೆ, ನಾನು ಹೆಚ್ಚು ಸಂತೋಷಪಡುತ್ತೇನೆ. ನೀವು ಮನೆಯಲ್ಲಿ ಕಡಿಮೆ ಸಮಯ ಕಳೆದು, ಕಚೇರಿಯಲ್ಲಿ ಹೆಚ್ಚು ಸಮಯ ವ್ಯಯಿಸಿ” ಎಂದು ತಮ್ಮ ಉದ್ಯೋಗಿಗಳಿಗೆ ಹೇಳುತ್ತಿರುವುದು ಸೆರೆಯಾಗಿದೆ.

ಅವರ ಹೇಳಿಕೆ ಭಾರೀ ಚರ್ಚೆ ಮತ್ತು ವಿರೋಧಕ್ಕೆ ಗುರಿಯಾಗಿದೆ. ಸುಬ್ರಹ್ಮಣ್ಯನ್ ಹೇಳಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನಟಿ ದೀಪಿಕಾ ಪಡುಕೋಣೆ, “ಕೆಲಸ-ಜೀವನ ಸಮತೋಲನ ಮತ್ತು ಮಾನಸಿಕ ಆರೋಗ್ಯದ ಮಹತ್ವದ ಅರಿವು ಇರಬೇಕು. ಇಂತಹ ಹಿರಿಯ ಹುದ್ದೆಗಳಲ್ಲಿರುವ ಜನರು ಇಂತಹ ಹೇಳಿಕೆಗಳನ್ನು ನೀಡುವುದನ್ನು ನೋಡುವುದು ಆಘಾತಕಾರಿಯಾಗಿದೆ. ಇದು, ಮಾನಸಿಕ ಆರೋಗ್ಯದ ವಿಷಯ” ಎಂದಿದ್ದಾರೆ.

Advertisements
image 38 1

ಈ ವರದಿ ಓದಿದ್ದೀರಾ?: ಸಾರಿಗೆ ದರ ಏರಿಕೆ ಖಂಡನೀಯ, ಜೀವ ಹಿಂಡುವ ಜಿಎಸ್‌ಟಿ ಬಗ್ಗೆ ಬಿಜೆಪಿ ಏಕೆ ಬಾಯಿ ಬಿಡುತ್ತಿಲ್ಲ?

ಇತ್ತೀಚೆಗೆ, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಾರದಲ್ಲಿ 70 ಗಂಟೆಗಳ ಕೆಲಸದ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ, ಅವರ ಸಾಲಿಗೆ ಸುಬ್ರಹ್ಮಣ್ಯನ್ ಸೇರಿಕೊಂಡಿದ್ದಾರೆ. ಆದಾಗ್ಯೂ, 70 ಗಂಟೆ ಕೆಲಸ ಮಾಡುವ ವಿಚಾರವನ್ನು ಹಲವರು ಉದ್ಯಮಿಗಳು ತಿರಸ್ಕರಿಸಿದ್ದಾರೆ. ಉದ್ಯೋಗಿಗಳಿಗೆ ವಿಶ್ರಾಂತಿ ಬೇಕು. ವಿಶ್ರಾಂತಿ ಇಲ್ಲದೆ ಉತ್ತಮವಾದ ಕೆಲಸವನ್ನು ಮಾಡಲು ಮತ್ತು ಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X