ಕೆಆರ್‌ಎಸ್‌ನಿಂದ ಕಾವೇರಿಗೆ ಭಾರೀ ನೀರು; 100 ಅಡಿ ದಾಟಿದ ಮೆಟ್ಟೂರು ಡ್ಯಾಂ ನೀರಿನ ಮಟ್ಟ

Date:

Advertisements

ಕಳೆದ 90 ವರ್ಷಗಳಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹವು 71ನೇ ಬಾರಿಗೆ 100 ಅಡಿಗಳನ್ನು ದಾಟಿದೆ. ಶನಿವಾರ ರಾತ್ರಿರ ವೇಳೆಗೆ ಜಲಾಶಯದ ನೀರಿನ ಮಟ್ಟವು 103.7 ಅಡಿಗಳಿಗೆ ಏರಿಕೆಯಾಗಿದೆ. ಕರ್ನಾಟಕದ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಿಂದ ಕಾವೇರಿ ನದಿಗೆ 90,000 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ. ಹೀಗಾಗಿ, ತಮಿಳುನಾಡಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದ್ದು, ಮೆಟ್ಟೂರು ಜಲಾಶಯ ಭರ್ತಿಯಾಗುತ್ತಿದೆ.

ಮೆಟ್ಟೂರು ಅಣೆಕಟ್ಟಿನ ನೀರು ಸಂಗ್ರಹ ಸಾಮರ್ಥ್ಯವು 120 ಅಡಿಯಷ್ಟಿದ್ದು, ಸದ್ಯ, 103.7 ಅಡಿ ನೀರು ತುಂಬಿದೆ. ಜಲಾಶಯದಲ್ಲಿ ಸುಮಾರು 70 ಟಿಎಂಟಿ ಅಡಿ (70 ಸಾವಿರ ಮಿಲಿಯನ್ ಘನ ಅಡಿ) ನೀರು ಸಂಗ್ರಹವಾಗಿದೆ ಎಂದು ಅಧಿಕಾರಿಗಳು. ಜಲಾಶಯವು 93 ಟಿಎಂಸಿ ಅಡಿ ನೀರನ್ನು ಸಗ್ರಹಿಸುವ ಸಾಮರ್ಥ್ಯವನ್ನು ಹೊಂದಿದೆ.

ಕರ್ನಾಟಕದ ಕಬಿನಿ ಮತ್ತು ಕೆಆರ್‌ಎಸ್‌ ಅಣೆಕಟ್ಟುಗಳು ಸಂಪೂರ್ಣವಾಗಿ ತುಂಬಿವೆ. ಹೀಗಾಗಿ, ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಒಟ್ಟು 1,20,000 ಕ್ಯೂಸೆಕ್ಸ್‌ ನೀರನ್ನು ಹರಿಬಿಡಲಾಗುತ್ತಿದೆ. ಕಾವೇರಿ ನದಿಗೆ ಮೂಲಕ ಮೆಟ್ಟೂರು ಅಣೆಕಟ್ಟೆಗೆ 1,23,000 ಕ್ಯೂಸೆಕ್ಸ್‌ ನೀರು ಹರಿದು ಹೋಗುತ್ತಿದೆ ಎಂದು ವರದಿಯಾಗಿದೆ.

Advertisements

ಶನಿವಾರ ರಾತ್ರಿ 8 ಗಂಟೆಯ ವೇಳೆಗೆ, ಮೆಟ್ಟೂರು ಅಣೆಕಟ್ಟೆಗೆ ಒಳಹರಿವು 1.23 ಲಕ್ಷ ಕ್ಯೂಸೆಕ್ಸ್‌ ಇದ್ದು, ಹೊರಹರಿವು 1,000 ಕ್ಯೂಸೆಕ್ಸ್‌ ಇದೆ ಎಂದು ಮೆಟ್ಟೂರು ಅಧಿಕಾರಿಗಳು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿ ನೀರಾವರಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವಲ್ಲಿ ಮೆಟ್ಟೂರು ಅಣೆಕಟ್ಟು ಪ್ರಮುಖ ಮೂಲವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X