ಸುಂದರ್ ವಿಕೆಟ್‌ ಕಿತ್ತು ಬೂಮ್ರಾ ಅಬ್ಬರ – ಗುಜರಾತ್ ತತ್ತರ; ಫೈನಲ್‌ಗಾಗಿ ನಾಳೆ ಮುಂಬೈ-ಪಂಜಾಬ್ ಕಾದಾಟ

Date:

Advertisements

ಮಾಡು ಇಲ್ಲವೇ ಮಡಿ ಪಂದ್ಯವೆಂದೇ ಪರಿಗಣಿಸಲಾಗಿದ್ದ ಐಪಿಎಲ್‌ನ ‘ಎಲಿಮಿನೇಟರ್’ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಗೆದ್ದು ಬೀಗಿದೆ. ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಐಪಿಎಲ್ 2025 ಟೂರ್ನಿಯಿಂದ ಗುಜರಾತ್ ಟೈಟಾನ್ಸ್‌ ತಂಡ ಹೊರಬಿದ್ದಿದೆ. ಪಂದ್ಯದಲ್ಲಿ ಗೆದ್ದ ಮುಂಬೈ ತಂಡವು ಪಂಜಾಬ್ ತಂಡದ ಜೊತೆ ಭಾನುವಾರ ನಡೆಯಲಿರುವ ‘ಕ್ವಾಲಿಫೈಯರ್-2’ ಪಂದ್ಯದಲ್ಲಿ ಫೈನಲ್‌ಗಾಗಿ ಸೆಣೆಸಾಟ ನಡೆಸಲಿದೆ.

ಶುಕ್ರವಾರ, ಪಂಜಾಬ್‌ನ ನ್ಯೂ ಚಂಡೀಗಢದಲ್ಲಿರುವ ‘ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣ’ದಲ್ಲಿ ಮುಂಬೈ ಮತ್ತು ಗುಜರಾತ್ ನಡುವೆ ಭಾರೀ ಹಣಾಹಣಿ ನಡೆಯಿತು. ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಬರೋಬ್ಬರಿ 229 ರನ್‌ಗಳಿಸಿತ್ತು. ಬೃಹತ್ ಮೊತ್ತದ ಬೆನ್ನತ್ತಿದ ಗುಜರಾತ್ 8 ವಿಕೆಟ್‌ ನಷ್ಟದೊಂದಿಗೆ 208 ರನ್‌ಗಳನ್ನಷ್ಟೇ ಕಲೆಹಾಕಿ, ಸೋಲುಂಡಿತು.

ಗುಜರಾತ್ ತಂಡದಲ್ಲಿ ಸಾಯಿ ಸುದರ್ಶನ್ ಮತ್ತು ವಾಷಿಂಗ್ಟನ್ ಸುಂದರ್ ಅತ್ಯುತ್ತಮ ಆಟ ಪ್ರದರ್ಶಿಸಿದರು. ಸಾಯಿ ಸುದರ್ಶನ್ 49 ಎಸೆತಗಳನ್ನು ಎದುರಿಸಿ 80 ರನ್‌ಗಳಿಸಿದರೆ, ಸುಂದರ್ 24 ಎಸೆತಗಳನ್ನು ಎದುರಿಸಿ 48 ಕಲೆಹಾಕಿದರು. ಈ ಇಬ್ಬರೂ ಜೊತೆಯಾಟದಲ್ಲಿ 84 ರನ್‌ ಬಾರಿಸಿದರು. ಆದಾಗ್ಯೂ, ವಾಷಿಂಗ್ಟನ್ ಸುಂದರ್ ಅವರು ಜಸ್‌ಪ್ರೀತ್ ಬೂಮ್ರಾ ಅವರ ಅಬ್ಬರದ ಬೌಲಿಂಗ್‌ಗೆ ವಿಕೆಟ್‌ ಒಪ್ಪಿಸಿದರು. ಅಂತೆಯೇ, ಸಾಯಿ ಸುದರ್ಶನ್‌ ಕೂಡ ರಿಚರ್ಡ್‌ ಗ್ಲೀಸನ್ ಅವರ ಬೌಲಿಂಗ್‌ಗೆ ವಿಕೆಟ್‌ ಒಪ್ಪಿಸಿ, ಪೆವಿಲಿಯನ್‌ಗೆ ಮರಳಿದರು. ಇನ್ನು, ಉಳಿದ ಆಟಗಾರರು ಮುಂಬೈ ತಂಡದ ಬೌಲರ್‌ಗಳನ್ನು ಎದುರಿಸುವಲ್ಲಿ ವಿಫಲರಾದರು.

Advertisements

ತ್ರಾಸದಾಯಕ ಸೆಣೆಸಾಟದ ನಡುವೆ 208 ರನ್‌ ಗಳಿಸಿದ ಗುಜರಾತ್, ಸೋಲುಂಡು ಟೂರ್ನಿಯಿಂದ ಹೊರನಡೆಯಿತು.

ಇನ್ನು, ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಕ್ವಾಲಿಫಯರ್-2’ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಫೈನಲ್‌ ಪ್ರವೇಶಕ್ಕಾಗಿ ಮುಂಬೈ ಮತ್ತು ಪಂಜಾಬ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ಪಂದ್ಯದಲ್ಲಿ ಗೆದ್ದವರು. ಅದೇ ಸ್ಟೇಡಿಯಂನಲ್ಲಿ ಜೂನ್ 3ರಂದು ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಆಟವಾಡಲಿದ್ದಾರೆ. ಬಹುತೇಕ ಕ್ರಿಕೆಟ್ ಅಭಿಮಾನಿಗಳು ‘ಕ್ವಾಲಿಫಯರ್-2’ನಲ್ಲಿ ಪಂಜಾಬ್ ತಂಡ ಗೆಲ್ಲಬೇಕು. ಆರ್‌ಸಿಬಿ ಮತ್ತು ಪಂಜಾಬ್‌ ಫೈನಲ್‌ ಪಂದ್ಯ ನಡೆಯಬೇಕು. ಈ ಬಾರಿ, ಐಪಿಎಲ್‌ ಕಪ್‌ ಹೊಸ ವಿನ್ನರ್‌ಗಳ ಕೈಸೇರಬೇಕು ಎಂದು ಆಶಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X