ಹೊತ್ತಿ ಉರಿದ ಮಿನಿ ಬಸ್; ನಾಲ್ವರು ಸಜೀವ ದಹನ

Date:

Advertisements

ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ.

ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ ಘಟನೆ ನಡೆದಿದೆ. ಸಾವನ್ನಪ್ಪಿದ ಉದ್ಯೋಗಿಗಳು ‘ವ್ಯೋಮಾ ಗ್ರಾಫಿಕ್ಸ್‌’ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಕಂಪನಿಗೆ ಸೇರಿದ ಮಿನಿ ಬಸ್‌ ಕಂಪನಿಯ 12 ಉದ್ಯೋಗಿಗಳನ್ನು ವಾರ್ಜೆಯಿಂದ ಹಿಂಜೆವಾಡಿ ಕರೆದೊಯ್ಯುತ್ತಿತ್ತು. ಈ ವೇಳೆ, ಚಾಲಕನ ಪಾದದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ಕೂಡಲೇ ವಾಹನವನ್ನು ನಿಲ್ಲಿಸಿದ್ದಾರೆ. ವಾಹನದಲ್ಲಿದ್ದ ಕೆಲವರು ಮುಂಭಾಗದ ಬಾಗಿಲಿನಿಂದ ತಕ್ಷಣ ಇಳಿದಿದ್ದಾರೆ. ಆದರೆ, ಹಿಂಭಾಗದಲ್ಲಿ ಕುಳಿತಿದ್ದವರು ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ್ದಾರೆ. ಆದರೆ, ಬಾಗಿಲು ತೆರೆದುಕೊಂಡಿಲ್ಲ ಎಂದು ವರದಿಯಾಗಿದೆ.

Advertisements

ತುರ್ತು ಬಾಗಿಲು ತೆರೆದುಕೊಳ್ಳಲ ಕಾರಣ, ವಾಹನದಲ್ಲಿದ್ದ ಉದ್ಯೋಗಿಗಳಿಗೆ ಬೆಂಕಿ ತಗುಲಿದೆ. ನಾಲ್ವರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಉಳಿದ ಐವರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೀದರ್‌ನಲ್ಲೂ ಮತ್ತೊಂದು ಘಟನೆ

ತಾಪಮಾನದ ಕಾರಣಕ್ಕೆ ಬೆಂಕಿ ಹೊತ್ತಿಕೊಂಡು ಕೆಎಸ್‌ಆರ್‌ಟಿಸಿ ಬಸ್‌ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನಲ್ಲಿ ನಡೆದಿದೆ. ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌, ಔರಾದ್‌ ತಾಲೂಕಿನ ಕಪ್ಪಿಕೆರೆ ಗ್ರಾಮದ ಬಳಿ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದೆ. ಬಸ್‌ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್‌ ನಲ್ಲಿಸಿದ್ದು, ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಸ್‌ನಲ್ಲಿದ್‌ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X