ನಾಗರಿಕರ ಹತ್ಯೆಯ ತಪ್ಪುಗಳು ಮರುಕಳಿಸಬಾರದು: ಸೇನೆಗೆ ರಾಜನಾಥ್ ಸಿಂಗ್ ಸೂಚನೆ

Date:

Advertisements

ವಿಚಾರಣೆ ವೇಳೆಯಲ್ಲಿ ಸೇನೆಯಿಂದ ಮೃತಪಟ್ಟ ಮೂವರು ನಾಗರಿಕರ ಬಗ್ಗೆ ಸ್ಪಷ್ಟವಾಗಿ ಸೂಚನೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ‘ಸೇನೆಯು ದೇಶವನ್ನು ಸುರಕ್ಷಿತವಾಗಿಡುತ್ತದೆ, ಆದರೆ ಕೆಲವೊಮ್ಮೆ ಇಂತಹ ತಪ್ಪುಗಳು ಉಂಟಾಗುತ್ತವೆ. ಮುಂದೆ ಇಂತಹ ತಪ್ಪುಗಳು ಮರುಕಳಿಸಬಾರದು’ ಎಂದು ಆದೇಶಿಸಿದ್ದಾರೆ.

‘ದೇಶದ ರಕ್ಷಣೆ ಮಾಡುವ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲುವುದು ಸೇನೆಯ ಜವಾಬ್ದಾರಿಯಾಗಿದೆ’ ಎಂದು ಭದ್ರತಾ ಸ್ಥಿತಿಯ ಪರಿಶೀಲನೆಗಾಗಿ ಜಮ್ಮು ಕಾಶ್ಮೀರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.

“ನೀವು ದೇಶದ ರಕ್ಷಕರು. ದೇಶದ ಭದ್ರತೆಯನ್ನು ನಿಭಾಯಿಸುವ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲುವುದು ಸಹ ನಿಮ್ಮ ಜವಾಬ್ದಾರಿಯಾಗಿದೆ. ಈ ದಿಸೆಯಲ್ಲಿಯೂ ನೀವು ಪ್ರಯತ್ನ ಮಾಡುತ್ತಿದ್ದೀರಿ. ಆದರೆ ಕೆಲವೊಮ್ಮೆ ತಪ್ಪುಗಳು ಸಂಭವಿಸುತ್ತದೆ. ದೇಶದ ನಾಗರಿಕರನ್ನು ನೋಯಿಸುವ ಇಂತಹ ತಪ್ಪುಗಳು ನಡೆಯಬಾರದು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹೇಳಿದರು.

Advertisements

“ಭಯೋತ್ಪಾದವನ್ನು ಕೊನೆಗೊಳಿಸಿ ಯುದ್ಧವನ್ನು ಗೆಲ್ಲಿ. ಹಾಗೆಯೇ ಇದೇ ಸಂದರ್ಭದಲ್ಲಿ ನಾಗರಿಕರ ಹೃದಯವನ್ನು ಗೆಲ್ಲಬೇಕು. ಇದು ನಿಮ್ಮ ಹೊಣೆಗಾರಿಕೆಯಾಗಿದೆ. ಭಾರತೀಯ ಸೇನೆ ಸಾಮಾನ್ಯ ಸೇನೆಯಾಗಿ ಉಳಿದಿಲ್ಲ. ಅತ್ಯುತ್ತಮ ಶಸ್ತ್ರಾಸ್ತ್ರ ಉಪಕರಣಗಳನ್ನು ಹೊಂದಿರುವ ಶಕ್ತಿಯುತ ಸೇನೆಯಾಗಿದೆ. ಭಾರತದ ಭದ್ರತೆ ನಿಮ್ಮ ಕೈಯಲಿದೆ” ಎಂದು ರಾಜನಾಥ್ ಸಿಂಗ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಪೂಂಚ್‌ನಲ್ಲಿ ದಾಳಿಯ ನಂತರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ರಾಜೌರಿ ಮತ್ತು ಜಮ್ಮುವಿಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದಾರೆ.

ಪೂಂಚ್‌ ಜಿಲ್ಲೆಯಲ್ಲಿ ಉಗ್ರರಿಂದ ಹತರಾದ ನಾಲ್ವರು ಸೈನಿಕರ ಸಾವಿನ ನಂತರ ವಿಚಾರಣೆಗಾಗಿ ಕರೆದೊಯ್ದಿದ್ದ ಸಂದರ್ಭದಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದರು. ಅವರು ಪೊಲೀಸರ ಚಿತ್ರಹಿಂಸೆಯಿಂದ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತವಾದ ನಂತರ ಕೇಂದ್ರ ರಕ್ಷಣಾ ಸಚಿವರು ಹೇಳಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ಆಡಳಿತವು ಮೃತಪಟ್ಟ ನಾಗರಿಕರ ಕುಟುಂಬಗಳಿಗೆ ಉದ್ಯೋಗ ಮತ್ತು ಪರಿಹಾರವನ್ನು ನೀಡಿದೆ. ಘಟನೆಯ ಬಗ್ಗೆ ಸೂಕ್ತ ಕ್ರಮ ಜರುಗಿಸಲು ಸೇನೆ ಈಗಾಗಲೇ ಆಂತರಿಕ ತನಿಖೆ ಮೂಲಕ ಕ್ರಮ ಕೈಗೊಂಡಿದೆ. ಅಲ್ಲದೆ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿಯೂ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X