ಸರದಿಯಲ್ಲಿ ಬಾ ಎಂದಿದ್ದಕ್ಕೆ ಶಾಸಕನಿಂದ ಕಪಾಳಮೋಕ್ಷ; ತಿರುಗಿ ಬಾರಿಸಿದ ಮತದಾರ

Date:

Advertisements

ಶಾಸಕ ನೊಬ್ಬ ವಿಐಪಿ ಸಂಸ್ಕೃತಿಯ ಲಜ್ಜೆಗೆಟ್ಟ ವರ್ತನೆ ತೋರಿದ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ತೆನಾಲಿ ವಿಧಾನಸಭಾ ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್‌ ಸರದಿ ಸಾಲನ್ನು ಬಿಟ್ಟು ನೇರವಾಗಿ ಮತ ಚಲಾಯಿಸಲು ತೆರಳಿದ್ದಾನೆ. ಇದನ್ನು ಗಮನಿಸಿದ ಮತದಾರರೊಬ್ಬರು ಸರದಿಯಲ್ಲಿ ಬನ್ನಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕೋಪಗೊಂಡ ಶಾಸಕ ಮತದಾರನ ಕೆನ್ನೆಗೆ ಹೊಡೆದಿದ್ದಾನೆ. ಮತದಾರ ಸಹ ಆಕ್ರೋಶಗೊಂಡು ಶಾಸಕನ ಕೆನ್ನೆಗೆ ತಿರುಗಿ ಬಾರಿಸಿದ್ದಾನೆ. ಶಾಸಕನಿಗೆ ಬಾರಿಸಿದ ನಂತರ ಸ್ಥಳದಲ್ಲಿದ್ದ ಶಾಸಕನ ಬೆಂಬಲಿಗರು ಅಮಾಯಕ ಮತದಾರನಿಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.

Advertisements

ಈ ಸುದ್ದಿಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಕೀಳು ಸಂಸ್ಕೃತಿಯನ್ನು ಪ್ರದರ್ಶಿಸಿದ ಶಾಸಕನ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದ್ದು, ಎಲ್ಲರಿಗೂ ಮಾದರಿಯಾಗಬೇಕಿದ್ದ ಜನಪ್ರತಿನಿಧಿಯೇ ಹೀಗೆ ಮಾಡಿದರೆ ಹೇಗೆ ಎಂದು ಅವರ ನಡೆಯನ್ನು ಖಂಡಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಇಂದು ಲೋಕಸಭೆಯ 25 ಕ್ಷೇತ್ರಗಳು ಹಾಗೂ ವಿಧಾನಸಭೆಯ 175 ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಯುತ್ತಿದೆ. ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಪಕ್ಷ ಟಿಡಿಪಿ ಹಾಗೂ ಕಾಂಗ್ರೆಸ್ ಸ್ಪರ್ಧೆ ನಡೆಸುತ್ತಿದೆ.

ತೆಲಂಗಾಣದಲ್ಲಿ ಕೂಡ ಇಂದೇ ಚುನಾವಣೆ ನಡೆಯುತ್ತಿದ್ದು, 17 ಲೋಕಸಭಾ ಕ್ಷೇತ್ರಗಳಿಗೂ ರಾಜ್ಯದ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X