ಕೇರಳ ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ; ಕ್ಷಮೆಯಾಚಿಸಿದ ಶಾಸಕ ಪಿವಿ ಅನ್ವರ್

Date:

Advertisements

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಶಾಸಕ ಪಿವಿ ಅನ್ವರ್ ಅವರು ತನ್ನ ಹೇಳಿಕೆ ವಿವಾದಕ್ಕೆ ತಿರುಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ತಪ್ಪಿ ಈ ರೀತಿ ಹೇಳಿಕೆ ನೀಡಿದ್ದೇನೆ ಎಂದು ಬುಧವಾರದ ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದಾರೆ.

ಇತ್ತೀಚೆಗೆ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಪಿವಿ ಅನ್ವರ್ ಅವರು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಯೋಜಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿದ್ದೀರಾ? ಕೇರಳ | ಹೊಸ ರಾಜಕೀಯ ಪಕ್ಷ ಕಟ್ಟಲು ಮುಂದಾದ ಸಿಪಿಐಎಂ ಬಂಡಾಯ ಶಾಸಕ ಪಿ ವಿ ಅನ್ವರ್

Advertisements

ಈಗ ಅಮೆರಿಕದಲ್ಲಿ ನೆಲೆಸಲು ಬೇಕಾದ ವ್ಯವಸ್ಥೆ ನೋಡಿಕೊಳ್ಳಲು ಅಮೆರಿಕಕ್ಕೆ ಪ್ರವಾಸ ಮಾಡುತ್ತಿದ್ದಾರೆ. ಇದಕ್ಕೆ ಬೇಕಾದರ ಪ್ರಯಾಣದ ವಿವರಗಳನ್ನು ಬೇಕಾದರೆ ನಾನು ಬಹಿರಂಗ ಮಾಡುತ್ತೇನೆ ಎಂದು ಸಿಪಿಐಎಂನ ಬಂಡಾಯ ಶಾಸಕ ಹೇಳಿದ್ದರು. ಮುಖ್ಯಮಂತ್ರಿಗಳು ತಮ್ಮನ್ನು ಕಳ್ಳ ಎಂದು ಬಿಂಬಿಸಿದ್ದಾರೆ. ಹಾಗೆಯೇ ಮುಖ್ಯಮಂತ್ರಿ ಮಾತ್ರವಲ್ಲ ಅವರ ಅಪ್ಪನ ಅಪ್ಪನಾದರೂ ನಾನು ಭಯಪಡುವುದಿಲ್ಲ ಎಂದಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಅನ್ವರ್, “ಮಾಧ್ಯಮದವರೊಂದಿಗೆ ಮಾತನಾಡುವಾಗ ನಾನು ತಪ್ಪಿ ಮಾತನಾಡಿದ್ದೇನೆ. ನನ್ನ ಹೇಳಿಕೆಯಲ್ಲಿ ನನ್ನ ಮಾತಿನ ಅರ್ಥ ಏನೆಂದರೆ, ಯಾರೇ ಆಗಲಿ ಅವರು ಎಷ್ಟೇ ಹಿರಿಯರಾದರೂ, ಸಿಎಂಗಿಂತ ಮೇಲಿದ್ದರೂ ನಾನು ಪ್ರತಿಕ್ರಿಯಿಸುತ್ತೇನೆ ಎಂದಾಗಿದೆ” ಎಂದು ಹೇಳಿಕೊಂಡಿದ್ದಾರೆ.

“ನನ್ನ ಮಾತುಗಳಿಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಮುಖ್ಯಮಂತ್ರಿ, ಅವರ ಕುಟುಂಬ ಮತ್ತು ಎಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ನನ್ನ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಮತ್ತು ನಿಜವಾದ ಕ್ಷಮೆಯನ್ನು ಕೇಳುತ್ತೇನೆ” ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕಳೆದ ಶುಕ್ರವಾರ ವಿಧಾನಸಭೆ ಅಧಿವೇಶನ ಆರಂಭವಾಗಿದ್ದರೂ, ಬುಧವಾರ ಮೊದಲ ಬಾರಿಗೆ ಅನ್ವರ್‌ ಅಧಿವೇಶನಕ್ಕೆ ಹಾಜರಾಗಿದ್ದರು. ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನಾಯಕರು ಸಾಮಾನ್ಯವಾಗಿ ಧರಿಸುವ ಶಾಲನ್ನು ಧರಿಸಿದ್ದ ಅನ್ವರ್ ಅವರು, ಸಾಮಾನ್ಯವಾಗಿ ಕಮ್ಯೂನಿಸ್ಟ್ ಕಾರ್ಯಕರ್ತರು ಧರಿಸುವ ಕೆಂಪು ಶಾಲನ್ನು ಕೂಡಾ ಕೈಯಲ್ಲಿ ಹಿಡಿದಿದ್ದರು ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X