ಮೋದಿ ಅದಾನಿಗೆ ಹತ್ತಾರು ಯೋಜನೆ ನೀಡಿದ್ದಾರೆ, ನಾವು 30 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ: ರಾಹುಲ್ ಗಾಂಧಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ  ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ ಸರ್ಕಾರ ರಚನೆಯಾದರೆ ಆಗಸ್ಟ್‌ 15ರೊಳಗೆ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಶುರು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.

ತೆಲಂಗಾಣದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೋದಿ ತಮ್ಮ ಸಂಪೂರ್ಣ ರಾಜಕೀಯ ಜೀವನದಲ್ಲಿ 22 ರಿಂದ 25 ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಲ್ಲದೆ ಮೋದಿಯವರು ಕೋಟ್ಯಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ. ನೋಟುಗಳ ನಿಷೇಧ ಹಾಗೂ ಜಿಎಸ್‌ಟಿ ಜಾರಿಗೊಳಿಸಿದ್ದು ಅದಾನಿಗಾಗಿ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

Advertisements

ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ನೂತನ ಸರ್ಕಾರ ಆಗಸ್ಟ್‌ 15ರೊಳಗೆ ಕೇಂದ್ರ ಸರ್ಕಾರದದಲ್ಲಿರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ ಎಂದು ರಾಹುಲ್ ತಿಳಿಸಿದರು.

“ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತದೆ ಆದರೆ ಕಾಂಗ್ರೆಸ್ ಮೀಸಲಾತಿಯ ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಉದ್ದೇಶಿಸಿದೆ. ನೀವು ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಾದ್ಯಂತ ಜಾತಿ ಜನಗಣತಿಯನ್ನು ನಡೆಸಲಿದೆ.ಬಿಜೆಪಿಯ ಕೆಲವು ನಾಯಕರು ಸಂವಿದಾನವನ್ನು ಬದಲಿಸಲು ಬಯಸುತ್ತಾರೆ. ಆದರೆ ಯಾವುದೇ ಶಕ್ತಿ ಇದನ್ನು ಮಾಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X