‘ಮಮ್ಮಿ-ಪಪ್ಪಾ, ನಾನು ಜೆಇಇ ಬರೆಯಲಾರೆ’; ಪತ್ರ ಬರೆದಿಟ್ಟು ಯುವತಿ ಆತ್ಮಹತ್ಯೆ

Date:

Advertisements

ನನಗೆ ಜೆಇಇ ಪರೀಕ್ಷೆ ಬರೆಯಲು ಆಗುತ್ತಿಲ್ಲ ಎಂದು ಪತ್ರ ಬರೆದಿಟ್ಟು 18 ವರ್ಷದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.

ನಿಹಾರಿಕಾ ಸೋಲಂಕಿ ಎಂಬ ಯುವತಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನವರಿ 31ರಂದು ನಿಗದಿಯಾಗಿದ್ದ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ಆಕೆ ಸಿದ್ದತೆ ನಡೆಸುತ್ತಿದ್ದರು. ಆದರೆ, ಪರೀಕ್ಷೆ ಬರೆಯಲು ಆಗುವುದಿಲ್ಲ ಎಂದು ಆಕೆ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ ಎಂದು ಕೋಟಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಧರಂವೀರ್ ಸಿಂಗ್ ಹೇಳಿದ್ದಾರೆ.

“ಮಮ್ಮಿ ಪಪ್ಪಾ, ನಾನು ಜೆಇಇ ಬರೆಯಲು ಸಾಧ್ಯವಿಲ್ಲ. ಆದ್ದರಿಂದ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ. ನಾನು ಕೆಟ್ಟ ಮಗಳು. ಕ್ಷಮಿಸಿ ಮಮ್ಮಿ ಪಪ್ಪಾ. ಇದು ಕೊನೆಯ ಆಯ್ಕೆ,” ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ.

Advertisements

ಆಕೆಯ ತಂದೆ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಮೂವರು ಹೆಣ್ಣು ಮಕ್ಕಳಲ್ಲಿ ನಿಹಾರಿಕಾ ಹಿರಿಯ ಮಗಳು. ಆಕೆ ಸಾವನ್ನಪ್ಪಿದಾಗ ಆಕೆಯ ತಂದೆ ಕೆಲಸಕ್ಕೆ ತೆರಳಿದ್ದರು. ಆಕೆಯ ತಾಯಿ ಮತ್ತು ಸೋದರಿಯರು ಅಜ್ಜಿಯ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಾಗ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಆಕೆಗೆ ಆಕೆಯ ತಾಯಿ ಕರೆ ಮಾಡಿದ್ದಾರೆ. ಆದರೆ, ಆಕೆ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಮನೆಗೆ ತೆರಳಿ ನೋಡಿದಾಗ, ಒಳಗಿನಿಂದ ಬಾಗಿಲು ‘ಲಾಕ್‌’ ಆಗಿತ್ತು. ಕಿಟಕಿಯಿಂದ ನೋಡಿದಾಗ, ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

“ನಿಹಾರಿಕಾ ತನ್ನ ಹೆಚ್ಚಿನ ಸಮಯವನ್ನು – ಪ್ರತಿದಿನ ಸುಮಾರು 8-9 ಗಂಟೆಗಳ ಕಾಲ – ಓದಿನಲ್ಲಿ ಕಳೆಯುತ್ತಿದ್ದಳು. ಅದರಲ್ಲಿ, ಸುಮಾರು ಆರು ಗಂಟೆಗಳ ಆಕೆ ತರಬೇತಿಗೆ ತೆರಳುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೋಟಾದಲ್ಲಿ ಈ ವರ್ಷ ನಡೆದ ಎರಡನೇ ಆತ್ಮಹತ್ಯೆ ಇದು. ಕಳೆದ ವಾರ ಉತ್ತರ ಪ್ರದೇಶದ ಮೊರಾದಾಬಾದ್ ನಿವಾಸಿಯೊಬ್ಬರು ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರೂ ಕೂಡ ಜೆಇಇಗೆ ತಯಾರಿ ನಡೆಸುತ್ತಿದ್ದರು. ಕಳೆದ ವರ್ಷ ನಗರದಲ್ಲಿ ಸುಮಾರು 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೂರು ದಿನಗಳ ಹಿಂದೆಯಷ್ಟೇ ಕೋಟಾ ಜಿಲ್ಲಾಧಿಕಾರಿ ಡಾ.ರವೀಂದ್ರ ಗೋಸ್ವಾಮಿ ಅವರು ‘ಕಾಮ್ಯಾಬ್ ಕೋಟಾ’ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದ್ದರು. ಆ ಯೋಜನೆ ಅಡಿಯಲ್ಲಿ ಅವರು ಪ್ರತಿ ಶುಕ್ರವಾರ ನಗರದ ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡು ಕೋಚಿಂಗ್ ಪಡೆಯುತ್ತಿರುವ ವಿದ್ಯಾರ್ಥಿಗಳೊಂದಿಗೆ ಭೋಜನ ಮಾಡುವುದರ ಜೊತೆಗೆ, ಜೆಇಇ ಮತ್ತು ನೀಟ್‌ ಆಕಾಂಕ್ಷಿಗಳು ಎದುರಿಸಬಹುದಾದ ಸಮಸ್ಯೆಗಳ ಕುರಿತು ಚರ್ಚಿಸುವುದು ಅವರ ಯೋಜನೆ ಉದ್ದೇಶವಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X