ಮುಂಗಾರು ಪ್ರವಾಹ, ಭೂಕುಸಿತ: ಜುಲೈನಲ್ಲಿ 100ಕ್ಕೂ ಹೆಚ್ಚು ಮಂದಿ ಬಲಿ

Date:

ಜುಲೈನಿಂದ ದೇಶಾದ್ಯಂತ ಮುಂಗಾರು ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ತಮ್ಮ ಮನೆಯನ್ನು ಕಳೆದುಕೊಂಡಿದ್ದಾರೆ ಎಂದು ಬುಧವಾರ ಅಧಿಕೃತ ಅಂಕಿಅಂಶಗಳು ಹೇಳಿವೆ.

- Advertisement -

ವಾರ್ಷಿಕ ಮುಂಗಾರು ರೈತರು ಅವಲಂಬಿಸಿರುವ ಮಳೆಯನ್ನು ತರುತ್ತಿದ್ದರೂ, ಹವಾಮಾನ ಬದಲಾವಣೆಯು ದಕ್ಷಿಣ ಏಷ್ಯಾ ಪ್ರದೇಶದಾದ್ಯಂತ ಈ ವಿದ್ಯಮಾನವನ್ನು ಹೆಚ್ಚು ಅನಿಯಮಿತ, ಅನಿರೀಕ್ಷಿತ ಮತ್ತು ಮಾರಕವಾಗಿಸಿದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಇದನ್ನೂ ಓದಿ: ಭಾರೀ ಮಳೆ | ಗುಜರಾತಿನಲ್ಲಿ ಪ್ರವಾಹ, ಕಾನ್ಪುರದಲ್ಲಿ 56 ವರ್ಷಗಳ ದಾಖಲೆ ಮುರಿದ ವರ್ಷಧಾರೆ

ದೇಶದ ಈಶಾನ್ಯ ರಾಜ್ಯವಾದ ಅಸ್ಸಾಂ ವಾರ್ಷಿಕ ಮಳೆಯಿಂದ ಹೆಚ್ಚು ಹಾನಿಗೊಳಗಾಗಿದೆ. ಕನಿಷ್ಠ 87 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಶಿವಸಾಗರ್ ಜಿಲ್ಲೆಯಲ್ಲಿ, ಹಲವಾರು ಪ್ರದೇಶಗಳು ನೀರಿನಿಂದ ಆವೃತ್ತವಾಗಿದ್ದು 47 ಮಂದಿ ಸಾವನ್ನಪ್ಪಿದ್ದಾರೆ.

ಈ ನಡುವೆ ಅಸ್ಸಾಂ ಅನ್ನು ಪ್ರವಾಹ ಮುಕ್ತವಾಗಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಭರವಸೆಯ ವಿಡಿಯೋವೂ ತೀವ್ರ ವೈರಲ್ ಆಗುತ್ತಿದೆ. ಅಸ್ಸಾಂನಲ್ಲಿ ಪ್ರತಿವರ್ಷ ಸಂಭವಿಸುವ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಇನ್ನೊಂದೆಡೆ ದಕ್ಷಿಣ ರಾಜ್ಯವಾದ ಕೇರಳದಲ್ಲಿ, ಹಲವಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಕಾಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ಹೇಳಿದ್ದಾರೆ. ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ, ನದಿಗಳು ಉಕ್ಕಿ ಹರಿದಿದೆ. ರಾಜ್ಯದಲ್ಲಿ 300 ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 10,000 ಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ.

ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಪ್ರದೇಶದಲ್ಲಿ, ಅತ್ಯಂತ ತೀವ್ರವಾದ ಮಳೆಯ ಹಲವಾರು ಸಣ್ಣ ಸ್ಫೋಟಗಳಲ್ಲಿ ಕನಿಷ್ಠ 31 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯ ಪ್ರದೇಶದಲ್ಲಿ ಸುಮಾರು 12,000 ಮಂದಿ ತಮ್ಮ ಮನೆಯನ್ನು ಕಳೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...