ಪುಣೆ | ಇಂದ್ರಯಾಣಿ ನದಿ ಸೇತುವೆ ಕುಸಿತ; ಇಬ್ಬರ ಸಾವು, 20ಕ್ಕೂ ಅಧಿಕ ಪ್ರವಾಸಿಗರು ನಾಪತ್ತೆ

Date:

Advertisements
Bose Military School
Advertisements
Bose Military School

ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ ಕುಂದ್ಮಲಾದಿಂದ ಭಾನುವಾರದ ಘಟನೆ ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!

“ದುರದೃಷ್ಟವಶಾತ್ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ: ಎಂದು ಎನ್‌ಸಿಪಿ ಶಾಸಕ ಸುನೀಲ್ ಶೆಲ್ಕೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ನಿವಾಸಿ ರಘುವೀರ್ ಶೆಲರ್, “ಅರ್ಧ ಗಂಟೆಗೂ ಮುಂಚೆ ಈ ಘಟನೆ ನಡೆದಿದೆ. ಈವರೆಗೆ 20-25 ಮಂದಿಯ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಂಡದ ಸಿಬ್ಬಂದಿ, “ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈವರೆಗೆ ಕೆಲವರ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಕುಸಿದ ಸೇತುವೆಯಡಿ 20-25 ಮಂದಿ ಸಿಲುಕಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಲಭ್ಯವಾಗಿರುವ ಮಾಹಿತಿ ಪ್ರಕಾರ ಹಲವು ಮಂದಿಯ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವು ಮಂದಿ ಕುಸಿದ ಸೇತುವೆಯಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ವಾರದಲ್ಲಿ ಎರಡನೇ ಬಾರಿಗೆ ಆಸ್ಪತ್ರೆ ದಾಖಲು

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಹೊಟ್ಟೆ...

ಮಹಾರಾಷ್ಟ್ರ | 130ಕ್ಕೂ ಹೆಚ್ಚು ಜನರಿದ್ದಾಗಲೇ ಕುಸಿದ ಸೇತುವೆ; 80ಕ್ಕೂ ಹೆಚ್ಚು ಜನರು ನದಿಪಾಲು!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮಾವಲ್ ತಾಲೂಕಿನ ಕುಂದಮಾಲ ಬಳಿ ಇಂದ್ರಾಯಣಿ ನದಿಗೆ...

ಗುಜರಾತ್‌ ವಿಮಾನ ದುರಂತ: ಮೃತರ ಸಂಖ್ಯೆಯ ಬಗ್ಗೆ ಹೆಚ್ಚಿದ ಗೊಂದಲ, ಅಧಿಕಾರಿಗಳು ಮೌನ

ಗುಜರಾತ್ ವಿಮಾನ ದುರಂತ ನಡೆದು ನಾಲ್ಕು ದಿನ ಕಳೆದಿದ್ದು ಇನ್ನೂ ಅಧಿಕೃತ...

ಅಸ್ಸಾಂ ಸಿಎಂ ಶರ್ಮಾ ಅವರ ‘ಕಂಡಲ್ಲಿ ಗುಂಡಿಕ್ಕುವ’ ಆದೇಶ ಸಾಂವಿಧಾನಿಕವೇ?

"ನಮ್ಮ ದೇಗುಲಗಳನ್ನು ಹಾನಿಪಡಿಸುವ ಉದ್ದೇಶದಿಂದ ಕೆಲ ಗುಂಪುಗಳು ಸಕ್ರಿಯವಾಗಿವೆ" ಎಂಬ ಕಾರಣ...

Download Eedina App Android / iOS

X