ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಯಾಣಿ ನದಿ ಸೇತುವೆ ಕುಸಿದು ಸುಮಾರು 20ಕ್ಕೂ ಅಧಿಕ ಪ್ರವಾಸಿಗರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಮೃತದೇಹ ಪತ್ತೆಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿ ಕಂಡುಬರುವ ಜನಪ್ರಿಯ ಪ್ರವಾಸಿ ತಾಣವಾದ ಕುಂದ್ಮಲಾದಿಂದ ಭಾನುವಾರದ ಘಟನೆ ವರದಿಯಾಗಿದೆ.
ಇದನ್ನು ಓದಿದ್ದೀರಾ? ಬಿಹಾರ | ಮತ್ತೊಂದು ಸೇತುವೆ ಕುಸಿತ; ಮೂರು ವಾರಗಳಲ್ಲಿ 13ನೇ ಪ್ರಕರಣ!
“ದುರದೃಷ್ಟವಶಾತ್ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಎನ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ: ಎಂದು ಎನ್ಸಿಪಿ ಶಾಸಕ ಸುನೀಲ್ ಶೆಲ್ಕೆ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ನಿವಾಸಿ ರಘುವೀರ್ ಶೆಲರ್, “ಅರ್ಧ ಗಂಟೆಗೂ ಮುಂಚೆ ಈ ಘಟನೆ ನಡೆದಿದೆ. ಈವರೆಗೆ 20-25 ಮಂದಿಯ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ” ಎಂದು ತಿಳಿಸಿದ್ದಾರೆ.
VIDEO | Bridge collapses over Indrayani Bridge in Pune. Rescue operation is underway. More details awaited.
— Press Trust of India (@PTI_News) June 15, 2025
(Full video available on PTI Videos – https://t.co/n147TvrpG7) pic.twitter.com/TnLBCrvvfH
ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ತಂಡದ ಸಿಬ್ಬಂದಿ, “ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈವರೆಗೆ ಕೆಲವರ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೂ ಕುಸಿದ ಸೇತುವೆಯಡಿ 20-25 ಮಂದಿ ಸಿಲುಕಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ಲಭ್ಯವಾಗಿರುವ ಮಾಹಿತಿ ಪ್ರಕಾರ ಹಲವು ಮಂದಿಯ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹಲವು ಮಂದಿ ಕುಸಿದ ಸೇತುವೆಯಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ” ಎಂದು ತಿಳಿಸಿದ್ದಾರೆ.
