ಹರಿಯಾಣ | ದಟ್ಟ ಮಂಜು; ಸರಣಿ ಅಪಘಾತ, ನಾಲ್ವರ ದಾರುಣ ಸಾವು

Date:

Advertisements

ದಟ್ಟವಾಗಿ ಆವರಿಸಿದ್ದ ಮಂಜಿನ ಕಾರಣದಿಂದಾಗಿ ಹಲವು ವಾಹನಗಳು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಜು ಮುಸುಕಿದ ಕಾರಣ ದಾರಿ ಕಾಣದೆ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಉಕ್ಲಾನಾದ ಸುರೇವಾಲಾ ಚೌಕ್‌ನಲ್ಲಿ ಹಿಂದಿನಿಂದ ಬಂದ ಕಾರೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿದ್ದೀರಾ? ಹರಿಯಾಣ | ಗುಂಡಿನ ದಾಳಿ; ಇಬ್ಬರು ಸಾವು

Advertisements

ಈ ಅಪಘಾತದಲ್ಲಿ ಗಾಯಾಳುಗಳನ್ನು ರಕ್ಷಿಸಲು ಜನರು ಧಾವಿಸಿ ರಸ್ತೆಯ ಮಧ್ಯದಲ್ಲಿ ನಿಂತಿದ್ದಾಗ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಆವರಿಸಿದ ಕಾರಣ ದಾರಿ ಕಾಣುತ್ತಿರಲಿಲ್ಲ ಎಂದು ಹೇಳಲಾಗಿದೆ.

ಟ್ರಕ್ ಹ್ಯುಂಡೈ ಕಾರಿನ ಮೇಲೆ ಬಿದ್ದಿದ್ದು, ಕನಿಷ್ಠ ಮೂರು ವಾಹನಗಳು ಅಪಘಾತಕ್ಕೀಡಾಗಿದೆ. ಇನ್ನು ಜನರು ಕಾರಿನ ಗಾಜನ್ನು ಹೊಡೆದು ಲಾರಿ ಚಾಲಕನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಹೆದ್ದಾರಿಯನ್ನು ತೆರವುಗೊಳಿಸಿದರು. ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಇನ್ನು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಆವರಿಸಿರುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಉತ್ತರ ಭಾರತದ ಹಲವು ನಗರಗಳಲ್ಲಿ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿದೆ ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X