ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಬಂಧನ; ಬಡವರ ನೋವು ಕೇಳುವವರಿಲ್ಲ ಎಂದ ಸಂತ್ರಸ್ತೆಯ ಪತಿ

Date:

Advertisements

ಮುಂಬೈ ನ ಬಿಎಂಡಬ್ಲ್ಯು ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಏಕನಾಥ್ ಶಿಂಧೆ ಬಣದ ನಾಯಕ ರಾಜೇಶ್ ಶಾ ಪುತ್ರ ಮಿಹಿರ್ ಶಾನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಿಹಿರ್ ಭಾನುವಾರ (ಜುಲೈ 7) ನಡೆಸಿದ ಅಪಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು.

ಮುಂಬೈನ ವಾರ್ಲೆ ಪ್ರದೇಶದಲ್ಲಿ ಮೀನು ಮಾರಾಟಗಾರರಾದ ದಂಪತಿ ಪ್ರದೀಪ್‌ ನಖ್ವಾ ಹಾಗೂ ಕಾವೇರಿ ನಖ್ವಾ  ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ  ವೇಗವಾಗಿ ಬಂದ ಮಿಹಿರ್ ಶಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದಿದೆ. ಸ್ಕೂಟರ್‌ನಿಂದ ಪ್ರದೀಪ್‌ ನಕ್ವಾ ಅವರು ಕೆಳಗೆ ಬಿದ್ದ ನಂತರ ಕಾವೇರಿ ನಖ್ವಾ ಅವರು ಕಾರಿನಡಿ ಸಿಲುಕಿದ್ದಾರೆ. ಕಾವೇರಿ ಅವರನ್ನು 100 ಮೀಟರ್‌ವರೆಗೂ ಕಾರು ಎಳೆದೊಯ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಮುಂಬೈ | ಶಿವಸೇನಾ ನಾಯಕನ ಪುತ್ರನಿಂದ ಹಿಟ್ ಆ್ಯಂಡ್ ರನ್: ಮಹಿಳೆಯನ್ನು 100 ಮೀಟರ್ ಎಳೆದೊಯ್ದ ಕಾರು

ಬಿಎಂಡಬ್ಲ್ಯು ಕಾರು ರಾಜೇಶ್ ಶಾ ಹೆಸರಿನಲ್ಲಿ ನೋಂದಣಿಯಾಗಿದ್ದು, ಪೊಲೀಸರು ಈಗಾಗಲೇ ರಾಜೇಶ್ ಶಾ ಹಾಗೂ ಚಾಲಕನನ್ನು ಬಂಧಿಸಿದ್ದಾರೆ.

ಈ ನಡುವೆ ಸುದ್ದಿಗಾರರೊಂದಿಗೆ ದುಃಖವನ್ನು ವ್ಯಕ್ತಪಡಿಸಿದ ಸಂತ್ರಸ್ತೆ ಕಾವೇರಿ ನಖ್ವಾ ಅವರ ಪತಿ ಪ್ರದೀಪ್‌ ನಖ್ವಾ, “ನಾನು ಆತನಿಗೆ ನಿಲ್ಲಿಸು ಎಂದು ಹೇಳಿದರೂ ಆತ ನಿಲ್ಲಿಸದೆ ವೇಗವಾಗಿ ಚಲಾಯಿಸುತ್ತಿದ್ದ. ಮೃತಪಡುವಾಗ ಆಕೆ ತುಂಬ ನೋವನ್ನು ಅನುಭವಿಸರಬೇಕು. ಇದು ಎಲ್ಲರಿಗೂ ಗೊತ್ತಿದ್ದರೂ ಯಾರೂ ಏನು ಮಾಡುತ್ತಿಲ್ಲ. ಬಡವರ ನೋವು ಯಾರು ಕೇಳುವವರಿಲ್ಲ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X