ಮುಂಬೈ | ಅಪ್ರಾಪ್ತ ಬಾಲಕಿಗೆ ‘ಹಾಟ್’ ಎಂದವನಿಗೆ ಮೂರು ವರ್ಷ ಜೈಲು ಶಿಕ್ಷೆ

Date:

Advertisements

ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ, ಆಕೆಯನ್ನು ‘ಹಾಟ್’ ಎಂದು ಕರೆದ 50 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶ ಹೊಂದಿದ್ದ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.

ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಸಿ ಜಾಧವ್ ಅವರು ಡಿಸೆಂಬರ್ 14 ರಂದು ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.

ಪ್ರಕರಣವು ಮೇ 24, 2016 ರಂದು ನಡೆದಿದ್ದು, ಆಗ ಸಂತ್ರಸ್ತ ಬಾಲಕಿಗೆ 13 ವರ್ಷ ವಯಸ್ಸಾಗಿತ್ತು.

Advertisements

ಸಾಕ್ಷಿಗಳ ಹೇಳಿಕೆ ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ವಿವರವಾಗಿ ಪರಿಶೀಲಿಸಿದಾಗ, ಮೇ 24, 2016ರಂದು ಬಾಲಕಿ ತನ್ನ ಸ್ನೇಹಿತನೊಂದಿಗೆ ಮಸೀದಿಯ ಬಳಿ ನಿಂತಿದ್ದ ಸಂದರ್ಭದಲ್ಲಿ ಆರೋಪಿಯು ಬಾಲಕಿಯನ್ನು ಅನುಚಿತ ಸ್ಥಳದಲ್ಲಿ ಸ್ಪರ್ಶಿಸಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಯು ಮುಂದುವರೆದು, ‘ನೀನು ತುಂಬಾ ಪ್ರಚೋದನಕಾರಿಯಾಗಿ ಇದ್ದೀಯಾ. ನಿನ್ನ ಕೆನ್ನೆಗೆ ಮುತ್ತು ಕೊಡುವ ಆಸೆಯಾಗುತ್ತಿದೆ’ ಎಂದಿದ್ದೂ ಅಲ್ಲದೇ ಆಕೆಯನ್ನು ತನ್ನೊಂದಿಗೆ ಕರೆದೊಯ್ಯಲು ಬಯಸಿದ್ದಾಗಿಯೂ ಕೋರ್ಟ್ ತಿಳಿಸಿದೆ.

ಆರೋಪಿಯು ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸುವುದು ಮತ್ತು ಅಂತಹ ಪದಗಳನ್ನು ಆಡಿರುವುದರ ಹಿಂದೆ ಇರುವುದು ಲೈಂಗಿಕ ದೌರ್ಜನ್ಯದ ಉದ್ದೇಶವಲ್ಲದೇ ಬೇರೇನಲ್ಲ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.

ಆರೋಪಿಗಳು ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X