ಮುಂಬೈನಲ್ಲಿ ಭಾರೀ ಮಳೆ | ನಾಲ್ವರ ಸಾವು; ಶಾಲಾ-ಕಾಲೇಜುಗಳಿಗೆ ರಜೆ

Date:

Advertisements

ಬುಧವಾರ ಸಂಜೆ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು ತೀವ್ರ ಪ್ರವಾಹ, ಟ್ರಾಫಿಕ್ ಜಾಮ್, ಸೆಂಟ್ರಲ್ ರೈಲ್ವೆ ಸೇವೆಗಳಿಗೆ, ವಿಮಾನದ ಮಾರ್ಗಕ್ಕೆ ಅಡ್ಡಿ ಉಂಟು ಮಾಡಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.

ಬುಧವಾರ ಸಂಜೆ 5 ಗಂಟೆಗೆ ಆರಂಭವಾದ ಮಳೆಯು ಐದು ಗಂಟೆಗಳ ಕಾಲ ಸುರಿದಿದೆ. ಈ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದಲ್ಲಿ 200 ಮಿ.ಮೀ.ಗೂ ಹೆಚ್ಚು ಮಳೆಯಾಗಿದ್ದು, ಪ್ರಯಾಣಿಕರು ರಸ್ತೆಗಳಲ್ಲಿ ಮತ್ತು ರೈಲು ನಿಲ್ದಾಣಗಳಲ್ಲಿ ಸಿಲುಕಿಕೊಂಡಿದ್ದರು.

45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದಲ್ಲಿ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದರೆ, ಕಲ್ಯಾಣ್‌ನ ಕಲ್ಲು ಕ್ವಾರಿಯಲ್ಲಿ ಇಬ್ಬರು ಕಾರ್ಮಿಕರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Advertisements

ಇದನ್ನು ಓದಿದ್ದೀರಾ? ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

ಈ ನಡುವೆ ಭಾರತೀಯ ಹವಾಮಾನ ಇಲಾಖೆಯು ಬುಧವಾರ ಸಂಜೆ ಮುಂಬೈ, ಥಾಣೆ ಮತ್ತು ರಾಯಗಢಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಗುರುವಾರ ಬೆಳಗಿನ ತನಕ ಅತಿ ಹೆಚ್ಚು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಎಚ್ಚರಿಕೆ ನೀಡಿದೆ. ಮುಂದಿ ಕೆಲವು ದಿನಗಳ ಕಾಲವೂ ಭಾರೀ ಮಳೆ ಇರಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಬೈ, ಥಾಣೆ, ಪಾಲ್ಘರ್, ಪುಣೆ ಮತ್ತು ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಜನರು ಅಗತ್ಯವಿಲ್ಲದ ಹೊರತಾಗಿ ಮನೆಯಿಂದ ಹೊರಬರದಂತೆ ಮುಂಬೈ ಪೊಲೀಸರು ಸಲಹೆ ನೀಡಿದ್ದಾರೆ.

ಇನ್ನು ಮುಂಬೈನಲ್ಲಿ ಸಾಕಷ್ಟು ಜನರು ಪ್ರತಿನಿತ್ಯ ರೈಲಿನಲ್ಲೇ ಪ್ರಯಾಣ ಮಾಡುತ್ತಾರೆ. ಆದರೆ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ರೈಲುಗಳು ರದ್ದಾಗಿದೆ. ಕೆಲವು ಸ್ಥಳಗಳಲ್ಲಿ ರೈಲು ಸೇವೆ ವಿಳಂಬವಾಗಿ ಆರಂಭವಾಗಿದೆ.

ಇದನ್ನು ಓದಿದ್ದೀರಾ? ವಿಜಯಪುರ | ಭಾರೀ ಮಳೆಗೆ ನಲುಗಿದ ಗುಮ್ಮಟ ನಗರಿ; ಜನ-ಜೀವನ ಅಸ್ತವ್ಯಸ್ತ

ಈ ನಡುವೆ ಮುಂಬೈ ವಿಮಾನ ನಿಲ್ದಾಣದಲ್ಲಿ 14 ವಿಮಾನಗಳ ಸೇವೆ ವ್ಯತ್ಯಯವಾಗಿದೆ ಮತ್ತು ಏಳು ಇತರ ವಿಮಾನಗಳು ಲ್ಯಾಂಡಿಂಗ್ ಅನ್ನು ಬೇರೆಡೆ ಮಾಡಲಾಗಿದೆ.

ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಾಗಿತ್ತು. ಆದರೆ ಭಾರೀ ಮಳೆ ಕಾರಣದಿಂದಾಗಿ ಈ ಮೋದಿ ಪುಣೆ ಭೇಟಿ ರದ್ದುಗೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X