ಮುಂಬೈ ರೈಲುಗಳಲ್ಲಿ ತಾಂತ್ರಿಕ ತೊಂದರೆ; ನಡೆದು ಕಚೇರಿಗೆ ತೆರಳಿದ ಪ್ರಯಾಣಿಕರು

Date:

Advertisements

ಮುಂಬೈ ಸ್ಥಳೀಯ ರೈಲು ಸೇವೆಯಲ್ಲಿ ತಾಂತ್ರಿಕ ತೊಂದರೆಯುಂಟಾದ ಕಾರಣ ಹಲವು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ಮಾರ್ಗದಲ್ಲಿ 15 ನಿಮಿಷಗಳ ಕಾಲ ತಾಂತ್ರಿಕ ಸಮಸ್ಯೆಯುಂಟಾಗಿದೆ.

ತಾಂತ್ರಿಕ ಸಮಸ್ಯೆಯುಂಟಾಗಿ ಬೇರೆ ಮಾರ್ಗಗಳಲ್ಲಿ ಆಗಮಿಸಿದ ಕಾರಣ ಸುಮಾರು 35 ನಿಮಿಷಗಳ ಕಾಲ ಹಲವು ಸ್ಥಳೀಯ ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು.

ರೈಲುಗಳು ಸರಿಯಾದ ಸಮಯಕ್ಕೆ ಸಿಗದ ಕಾರಣ ನೂರಾರು ಪ್ರಯಾಣಿಕರು ನಡೆದುಕೊಂಡು ತಮ್ಮ ಕಚೇರಿಗಳಿಗೆ ತೆರಳಿದರು. ಪ್ರಯಾಣಿಕರು ಕಚೇರಿಗಳ ಕಡೆ ತೆರಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

“ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆ ತಾಂತ್ರಿಕ ತೊಂದರೆಯಿಂದ 15 ನಿಮಿಷಗಳ ಕಾಲ ತೊಂದರೆಯುಂಟಾಯಿತು. ಇದರಿಂದ ಸುಮಾರು 7.45 ರಿಂದ 8.20ರವರೆಗೂ ಪ್ರಯಾಣಿಕರು ರೈಲು ಲಭ್ಯತೆಯಲ್ಲಿ ತೊಂದರೆಯುಂಟಾಯಿತು. ಕೆಲವು ರೈಲುಗಳು ಬೇರೆ ಮಾರ್ಗಗಳಿಂದ ಬಂದ ಕಾರಣ ಕೆಲವು ನಿಮಿಷಗಳವರೆಗೆ ತಡೆಯುಂಟಾಯಿತು” ಎಂದು ಕೇಂದ್ರ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆಯಿರುವ ಯುಪಿ ಪಾಸ್ಟ್ ಮಾರ್ಗದ ರೈಲ್ವೆ ಹಳಿಯ ಮೇಲೆ ಬಿದರಿನಲ್ಲಿ ನಿರ್ಮಿಸಲಾಗಿದ್ದ ಆಕೃತಿ ಬಿದ್ದ ಕಾರಣ ಈ ಘಟನೆ ಸಂಭವಿಸಿದೆ. ಘಟನೆ ನಡೆದು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾದ ನಂತರ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಪರಿಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ನಿತ್ಯ 70 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಾರೆ. ಕೇಂದ್ರ ರೈಲ್ವೆ ಹಾಗೂ ಪಶ್ಚಿಮ ರೈಲ್ವೆ ಈ ಸೌಲಭ್ಯವನ್ನು ದೊರಕಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X